ಬಿಜೆಪಿ ಹೇಳಿದಂಗೆ ಇನ್ಸ್ಪೆಕ್ಟರ್ ಧನಂಜಯ್ನ ಸಸ್ಪೆಂಡ್ ಮಾಡೋಕ್ಕಾಗಲ್ಲ ಖರ್ಗೆ ಗರಂ
ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಹೊಡೆದ್ರೆ ನಿಮ್ ಗ್ರಹಚಾರ ಬಿಡಿಸ್ತೀನಿ ಎನ್ನುವ ಟಿ.ನರಸೀಪುರ ಇನ್ಸ್ಪೆಕ್ಟರ್ ಧನಂಜಯ್ ದರ್ಪದ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಇನ್ಸ್ಪೆಕ್ಟರ್ ಧನಂಜಯ್ನನ್ನು ಅಮಾನತು ಮಾಡಲೇಬೇಕೆಂದು ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಕ್ರಮ ಬಗ್ಗೆ ನೋಡೋಣ, ಬಿಜೆಪಿಯವರನ್ನು ಕೇಳಿ ಮಾಡಲು ಆಗಲ್ಲ. ಬಿಜೆಪಿಯವರು ಹೇಳಿದಂತೆ ನಾವು ಆಡಳಿತ, ಕೇಳುವುದಕ್ಕೆ ಆಗಲ್ಲ. ಅಶೋಕ್ ಗೃಹ ಸಚಿವರಿದ್ದಾಗ ಸಭೆ ಮಾಡಿಲ್ವಾ, ಸೂಚನೆ ಕೊಟ್ಟಿಲ್ವಾ? ಅಶೋಕ್ ಇದ್ದಾಗ ಏನು ನಿಯಮ ಇತ್ತೋ ಈಗಲೂ ಅದೇ ನಿಯಮ. ಮೈಸೂರಿನ ನಿರುದ್ಯೋಗಿ ರಾಜಕಾರಣಿಗೆ ಕೆಲಸ ಇಲ್ಲ.
ಬೆಂಗಳೂರು, (ಸೆಪ್ಟೆಂಬರ್ 14): ಮಸೀದಿ ಮುಂದೆ ಮೆರವಣಿಗೆ ಮಾಡಿ ಪಟಾಕಿ ಹೊಡೆದ್ರೆ ನಿಮ್ ಗ್ರಹಚಾರ ಬಿಡಿಸ್ತೀನಿ ಎನ್ನುವ ಟಿ.ನರಸೀಪುರ ಇನ್ಸ್ಪೆಕ್ಟರ್ ಧನಂಜಯ್ ದರ್ಪದ ಧಮ್ಕಿ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಇನ್ಸ್ಪೆಕ್ಟರ್ ಧನಂಜಯ್ನನ್ನು ಅಮಾನತು ಮಾಡಲೇಬೇಕೆಂದು ವಿಪಕ್ಷ ಬಿಜೆಪಿ ಪಟ್ಟು ಹಿಡಿದಿದೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದು, ಕ್ರಮ ಬಗ್ಗೆ ನೋಡೋಣ, ಬಿಜೆಪಿಯವರನ್ನು ಕೇಳಿ ಮಾಡಲು ಆಗಲ್ಲ. ಬಿಜೆಪಿಯವರು ಹೇಳಿದಂತೆ ನಾವು ಆಡಳಿತ, ಕೇಳುವುದಕ್ಕೆ ಆಗಲ್ಲ. ಅಶೋಕ್ ಗೃಹ ಸಚಿವರಿದ್ದಾಗ ಸಭೆ ಮಾಡಿಲ್ವಾ, ಸೂಚನೆ ಕೊಟ್ಟಿಲ್ವಾ? ಅಶೋಕ್ ಇದ್ದಾಗ ಏನು ನಿಯಮ ಇತ್ತೋ ಈಗಲೂ ಅದೇ ನಿಯಮ. ಮೈಸೂರಿನ ನಿರುದ್ಯೋಗಿ ರಾಜಕಾರಣಿಗೆ ಕೆಲಸ ಇಲ್ಲ. ಪೊಲೀಸ್ ಸ್ಟೇಷನ್ಗೆ ನುಗ್ಗುತ್ತೇನೆ ಅಂತಾರಲ್ಲ, ಸರಿನಾ? ಇವರ ಸರ್ಕಾರದಲ್ಲಿ ಠಾಣೆಗೆ ನುಗ್ತೀನಿ ಅಂದ್ರೆ ಸುಮ್ಮನಿರುತ್ತೀರಾ? ಎಸ್ಪಿ ವರದಿ ಕೊಡಲಿ, ವರದಿ ನೋಡಿ ತೀರ್ಮಾನ ಮಾಡುತ್ತೇವೆ. ಬಿಜೆಪಿಯವರು ಅಮಾನತು ಮಾಡಿ ಅಂದ್ರೆ ಮಾಡಿಬಿಡಬೇಕಾ? ಎಂದು ಪ್ರಶ್ನಿಸಿದರು. ಈ ಮೂಲಕ ಇನ್ಸ್ಪೆಕ್ಟರ್ ಧನಂಜಯ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

