ಕರ್ನಾಟಕ-ಕೇರಳ ಗಡಿಭಾಗದಲ್ಲಿ ನಿಫಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿರುವ ಹೆಚ್ ಡಿ ಕೋಟೆ ತಹಸೀಲ್ದಾರ್ ಮತ್ತು ವೈದ್ಯಾಧಿಕಾರಿ

ಅರುಣ್​ ಕುಮಾರ್​ ಬೆಳ್ಳಿ

Updated on: Sep 15, 2023 | 11:35 AM

ತಹಸೀಲ್ದಾರ್ ಸಣ್ಣ ರಾಮಪ್ಪ ಮತ್ತು ತಾಲ್ಲೂಕು ವೈದ್ಯಾಧಿಕಾರಿ ರವಿಕುಮಾರ್ ಗಡಿಭಾಗಕ್ಕೆ ತೆರಳಿ ಹತ್ತಿರದ ಗ್ರಾಮಗಳ ಜನರಿಗೆ ಮತ್ತು ಕೇರಳದಿಂದ ಕರ್ನಾಟಕ ಪ್ರವೇಶಿಸುವ ಜನರಿಗೆ ನಿಫಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸೋಂಕಿಗೊಳಗಾಳಗಾಗದಿಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಆಕಸ್ಮಾತ್ ಸೋಂಕಿಗೊಳಗಾದಲ್ಲಿ ಅನುಸರಿಸಬೇಕಾದ ವಿಧಾನಗಳನ್ನು ಅವರು ವಿವರಿಸುತ್ತಿದ್ದಾರೆ.

ಮೈಸೂರು: ವೈರಸ್ ಗಳ ಮೂಲಕ ಉಂಟಾಗುವ ಸೋಂಕಿನ ಪ್ರಕರಣಗಳು ಕೇರಳದಲ್ಲಿ ಮೊದಲು ಕಾಣಿಸಿಕೊಳ್ಳುತ್ತವೆ. ಈಗ, ಬಾವಲಿಗಳ ಮೂಲಕ ಹಬ್ಬುವ ಅಪಾಯಕಾರಿ ನಿಫಾ ವೈರಸ್ ಸೋಂಕಿನ ಪ್ರಕರಣಗಳು ಆ ರಾಜ್ಯದಲ್ಲಿ ಕಾಣಿಸಿಕೊಂಡಿದ್ದು ಸೋಂಕಿತರ ಸಂಖ್ಯೆ ಕ್ರಮೇಣ ಹೆಚ್ಚುತ್ತಿದೆ. ಹಾಗಾಗೇ, ಕೇರಳ-ಕರ್ನಾಟಕ ಗಡಿಭಾಗದಲ್ಲಿ ಕಟ್ಟೆಚ್ಚರವಹಿಸಲಾಗಿದೆ ಮತ್ತು ನೆರೆ ರಾಜ್ಯದಿಂದ ವಾಹನಗಳಲ್ಲಿ ಬರುವ ಜನರ ಆರೋಗ್ಯದ ತಪಾಸಣೆ ನಡೆಸಲಾಗುತ್ತಿದೆ. ಗಮನಾರ್ಹ ಸಂಗತಿಯೆಂದರೆ, ಹೆಚ್ ಡಿ ಕೋಟೆಯ ತಹಸೀಲ್ದಾರ್ ಸಣ್ಣ ರಾಮಪ್ಪ ಮತ್ತು ತಾಲ್ಲೂಕು ವೈದ್ಯಾಧಿಕಾರಿ ರವಿಕುಮಾರ್ ಗಡಿಭಾಗಕ್ಕೆ ತೆರಳಿ ಹತ್ತಿರದ ಗ್ರಾಮಗಳ ಜನರಿಗೆ ಮತ್ತು ಕೇರಳದಿಂದ ಕರ್ನಾಟಕ ಪ್ರವೇಶಿಸುವ ಜನರಿಗೆ ನಿಫಾ ವೈರಸ್ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ. ಸೋಂಕಿಗೊಳಗಾಳಗಾಗದಿಲು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ಆಕಸ್ಮಾತ್ ಸೋಂಕಿಗೊಳಗಾದಲ್ಲಿ ಅನುಸರಿಸಬೇಕಾದ ವಿಧಾನಗಳನ್ನು ಅವರು ವಿವರಿಸುತ್ತಿದ್ದಾರೆ. ಸೋಂಕು ಯಾವುದೇ ಆಗಿರಲಿ prevention is better than cure ಅಂತ ಹೇಳತ್ತಾರಲ್ಲ? ಅದು ಸರ್ವಕಾಲಿಕ ಸತ್ಯ, ಹಾಗಾಗಿ ನಮ್ಮ ಎಚ್ಚರದಲ್ಲಿ ನಾವಿರಬೇಕು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.