ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಹಶೀಲ್ದಾರ್

Edited By:

Updated on: Oct 19, 2025 | 10:04 AM

ಚಿತ್ತಾಪುರ ಕ್ಷೇತ್ರದಲ್ಲಿ ನಡೆಯಬೇಕಿದ್ದ ಆರ್​ಎಸ್​ಎಸ್ ಪಥಸಂಚಲನಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ್ ಅನುಮತಿ ನಿರಾಕರಿಸಿದ್ದಾರೆ. ಖಾಸಗಿ ಸಂಘಸಂಸ್ಥೆಗಳಿಗೆ ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ ಎಂಬ ಪ್ರಿಯಾಂಕ್ ಖರ್ಗೆ ಅವರ ಪತ್ರದ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ. ಅನುಮತಿ ನಿರಾಕರಣೆಯಿಂದ ಆರ್​ಎಸ್​ಎಸ್ ಕಾರ್ಯಕರ್ತರು ಕಾನೂನು ಹೋರಾಟಕ್ಕೆ ಸಜ್ಜಾಗಿದ್ದಾರೆ.

ಕಲಬುರಗಿ, ಅಕ್ಟೋಬರ್​ 19: ರಾಜ್ಯದಲ್ಲಿ ಆರ್​​​ಎಸ್​​ಎಸ್​​ (RSS) ಚಟುವಟಿಕೆಗಳಿಗೆ ನಿರ್ಬಂಧ ವಿಧಿಸುವ ವಿಚಾರದ ಸಂಘರ್ಷ ತಾರಕ್ಕೇರಿದೆ. ಈ ಮಧ್ಯೆ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಆರ್​ಎಸ್​ಎಸ್​​ ಪಥ ಸಂಚಲನಕ್ಕೆ ಅನುಮತಿ ನಿರಾಕರಿಸುವ ಮೂಲಕ ತಹಶೀಲ್ದಾರ್​ ನಾಗಯ್ಯ ಹಿರೇಮಠ ಶಾಕ್​ ನೀಡಿದ್ದಾರೆ. ಸದ್ಯ ಕಾನೂನು ಹೋರಾಟಕ್ಕೆ ಆರ್​ಎಸ್​ಎಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More