KDP Meeting; ರಾಮನಗರ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಉಪ ಮುಖ್ಯಮಂತ್ರಿಯಾಗಿ ಬಂದಿಲ್ಲ, ಕನಕಪುರ ಶಾಸಕನಾಗಿ ಬಂದಿದ್ದೇನೆ: ಡಿಕೆ ಶಿವಕುಮಾರ್

Updated on: Jun 26, 2023 | 2:37 PM

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುವ ಟೀಕೆಗಳನ್ನು ಗಮನಕ್ಕೆ ತಂದರೂ ಶಿವಕುಮಾರ್ ಮೊದಲಿನ ಹಾಗೆ ಉಗ್ರವಾಗಿ ಟೀಕಿಸದೆ, ಸೌಮ್ಯವಾಗಿ ಉತ್ತರಿಸುತ್ತಾರೆ.

ರಾಮನಗರ: ಕನ್ನಡಿಗರೆಲ್ಲ ಇದನ್ನು ಗಮನಿಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅಧಿಕಾರವಹಿಸಿಕೊಂಡಾಗಿನಿಂದ ವಿರೋಧ ಪಕ್ಷದ ನಾಯಕರನ್ನು ಟೀಕಿಸುವ ಗೋಜಿಗೆ ಹೋಗದೆ ಕೇವಲ ಕೆಲಸದ ಕಡೆ ಗಮನಹರಿಸುತ್ತಿದ್ದಾರೆ. ಪತ್ರಕರ್ತರು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುವ ಟೀಕೆಗಳನ್ನು ಗಮನಕ್ಕೆ ತಂದರೂ ಶಿವಕುಮಾರ್ ಮೊದಲಿನ ಹಾಗೆ ಉಗ್ರವಾಗಿ ಟೀಕಿಸದೆ, ಸೌಮ್ಯವಾಗಿ ಉತ್ತರಿಸುತ್ತಾರೆ. ಇವತ್ತು ರಾಮಮಗರ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿಯೊಂದಿಗೆ (Ramalinga Reddy) ಆಗಮಿಸಿದ ಶಿವಕುಮಾರ್, ತಾನು ಜಿಲ್ಲೆಯ ಒಬ್ಬ ಶಾಸಕನಾಗಿ ಸಭೆಯಲ್ಲಿ ಭಾಗವಹಿಸುತ್ತಿದ್ದೇನೆಯೇ ಹೊರತು ಉಪ ಮುಖ್ಯಮಂತ್ರಿಯಾಗಿ ಅಲ್ಲ, ರೆಡ್ಡಿಯವರೇ ಸಭೆ ನಡೆಸುತ್ತಾರೆ ಎಂದು ಹೇಳಿ ಹಿಂದಿನ ಉಸ್ತುವಾರಿ ಸಚಿವ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಅವರ ಹೆಸರೇಳದೆ ನಯವಾಗಿ ಟೀಕಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

.

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More