10 ಲಕ್ಷ ರೂ.ಭೂಮಿಗೆ 10 ಕೋಟಿ ರೂ: ಸದನದಲ್ಲಿ ಯತ್ನಾಳ್ vs ಡಿಕೆಶಿ ವಾಕ್ಸಮರ

Updated on: Dec 09, 2025 | 2:52 PM

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದ ಎರಡನೇ ದಿನವಾದ ಇಂದು(ಡಿಸೆಂಬರ್ 09) ಪ್ರಶ್ನೋತ್ತರ ಕಲಾಪ ವೇಳೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಬಗ್ಗೆ ಪ್ರಸ್ತಾಪಿಸಿದರು. ಭೂ ಪರಿಹಾರಕ್ಕೆ ಕಾಲಮಿತಿ ಯಾವಾಗ ನಿಗದಿ ಮಾಡುತ್ತೀರಿ. ಆದೇಶ ಆಗಿರುವ ಹಿಂದಿನ ವ್ಯಾಜ್ಯಗಳಿಗೆ ಯಾವಾಗ ಪರಿಹಾರ ಕೊಡುತ್ತೀರಿ ಎಂದು ಪ್ರಶ್ನಿಸಿದ್ದರು.

ಬೆಳಗಾವಿ, (ಡಿಸೆಂಬರ್ 09): ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶದ (Belagavi Winter Session) ಎರಡನೇ ದಿನವಾದ ಇಂದು(ಡಿಸೆಂಬರ್ 09) ಪ್ರಶ್ನೋತ್ತರ ಕಲಾಪ ವೇಳೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangowda patil Yatnal) ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಬಗ್ಗೆ ಪ್ರಸ್ತಾಪಿಸಿದರು. ಭೂ ಪರಿಹಾರಕ್ಕೆ ಕಾಲಮಿತಿ ಯಾವಾಗ ನಿಗದಿ ಮಾಡುತ್ತೀರಿ. ಆದೇಶ ಆಗಿರುವ ಹಿಂದಿನ ವ್ಯಾಜ್ಯಗಳಿಗೆ ಯಾವಾಗ ಪರಿಹಾರ ಕೊಡುತ್ತೀರಿ ಎಂದು ಪ್ರಶ್ನಿಸಿದ್ದರು.

ಇದಕ್ಕೆ ನೀರಾವರಿ ಸಚಿವ, ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿ, ಪರಿಹಾರ ಹತ್ತು ಲಕ್ಷಕ್ಕೆ ಹತ್ತು ಕೋಟಿ ನಿಗದಿ ಮಾಡಿದ್ದಾರೆ. ಇದನ್ನು ನಾನು ಒಪ್ಪಲ್ಲ, ಕಾನೂನಿನ ಮಿತಿಯಲ್ಲಿಯೇ ಪರಿಹಾರ ಕೊಡುತ್ತೇವೆ ಎಂದು ಉತ್ತರಿಸಿದರು. ಇದರಿಂದ ಆಕ್ರೋಶಗೊಂಡ ಯತ್ನಾಳ್, ಇದು ರೈತರು ಮತ್ತು ನ್ಯಾಯಾಂಗಕ್ಕೆ ಮಾಡಿದ ಅಪಮಾನ ಎಂದು ಸಭಾತ್ಯಾಗ ಮಾಡಿದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More