ದೀರ್ಘಾವಧಿ ಮೈತ್ರಿ ಕಾಯ್ದುಕೊಳ್ಳುವ ನಿಟ್ಟಿನೆಡೆ ಬಿಜೆಪಿ ನಾಯಕರ ಜೊತೆ ನಡೆದ ಮಾತುಕತೆ ಕೇಂದ್ರೀಕೃತವಾಗಿತ್ತು: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Sep 23, 2023 | 2:10 PM

ಸೀಟು ಹೊಂದಾಣಿಕೆ ವಿಷಯದಲ್ಲಿ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಗಳಿಲ್ಲ ಎಂದ ಕುಮಾರಸ್ವಾಮಿ ಮೈತ್ರಿ ಹೊರತಾಗಿ ರಾಜ್ಯದ ಹಲವಾರು ಸಮಸ್ಯೆಗಳನ್ನು ಬಿಜೆಪಿ ನಾಯಕರೊಂದಿಗೆ ಚರ್ಚಿಸಲಾಗಿದೆ ಆ ವಿಷಯಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗದು ಎಂದರು.

ಬೆಂಗಳೂರು: ದೆಹಲಿಯಿಂದ ವಾಪಸ್ಸಾದ ಬಳಿಕ ನಗರದ ಕೆಐಎನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಬಿಜೆಪಿ ಜೊತೆ ಮೈತ್ರಿಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ (Amit Shah) ಮತ್ತು ಜೆಪಿ ನಡ್ಡಾ ಅವರೊಂದಿಗೆ ಸೌಹಾರ್ದಯುತ (cordial) ಮತ್ತು ಗೌರವಯುತವಾಗಿ ಚರ್ಚೆ ನಡೆದಿವೆ ಎಂದು ಹೇಳಿದರು. ಬಿಜೆಪಿ ಮತ್ತುಜ ಜೆಡಿಎಸ್ ಒಂದು ದೀರ್ಘಾವಧಿ ಸಂಬಂಧ ಕಾಯ್ದುಕೊಳ್ಳುವ ನಿಟ್ಟಿನೆಡೆ ಮಾತುಕತೆ ಕೇಂದ್ರೀಕೃತವಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು. ಸೀಟು ಹೊಂದಾಣಿಕೆ ವಿಷಯದಲ್ಲಿ ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಗಳಿಲ್ಲ ಎಂದು ಅವರು ಮೈತ್ರಿ ಹೊರತಾಗಿ ರಾಜ್ಯದ ಹಲವಾರು ಸಮಸ್ಯೆಗಳನ್ನು ಬಿಜೆಪಿ ನಾಯಕರೊಂದಿಗೆ ಚರ್ಚಿಸಲಾಗಿದೆ, ಆ ವಿಷಯಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲಾಗದು ಎಂದರು. ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವುದು ತಮ್ಮ ಆದ್ಯತೆಯಾಗಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.