ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರಿಕೆ

Edited By:

Updated on: Apr 27, 2025 | 12:31 PM

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪುರಾಣ ಪ್ರಸಿದ್ಧ ಬಪ್ಪನಾಡು‌ ದುರ್ಗಾಪರಮೇಶ್ವರಿ ದೇವಿಯ ಬ್ರಹ್ಮರಥೋತ್ಸವ ವೇಳೆ ತೇರು (Chariot Collapse) ಮುಗುಚಿ ಬಿದ್ದಿತ್ತು. ತೇರಿನ ಒಳಗೆ ಕುಳಿತಿದ್ದ ಅರ್ಚಕರು ಸೇರಿದಂತೆ ಸಾವಿರಾರು ಭಕ್ತರು ಪವಾಡ ಸದೃಶ ಎಂಬಂತೆ ಪಾರಾಗಿದ್ದರು. ಆದರೆ ಇದೀಗ ಈ ಘಟನೆ ಮಾತ್ರ ತುಳುನಾಡಿನ ಕಾರ್ಣಿಕ ದೈವದ (Daiva) ರೋಷಾವೇಷಕ್ಕೆ ಕಾರಣವಾಗಿದೆ. ಈ ಬಗ್ಗೆ ದೈವರಾಧಕ ತಮ್ಮಣ್ಣ ಶೆಟ್ಟಿ ಜೊತೆ ನಮ್ಮ ಪ್ರತಿನಿಧಿ ಅಶೋಕ್ ನಡೆಸಿರುವ ಮಾತುಕತೆ ಇಲ್ಲಿದೆ.

ಮಂಗಳೂರು, (ಏಪ್ರಿಲ್ 27): ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪುರಾಣ ಪ್ರಸಿದ್ಧ ಬಪ್ಪನಾಡು‌ ದುರ್ಗಾಪರಮೇಶ್ವರಿ ದೇವಿಯ ಬ್ರಹ್ಮರಥೋತ್ಸವ ವೇಳೆ ತೇರು (Chariot Collapse) ಮುಗುಚಿ ಬಿದ್ದಿತ್ತು. ತೇರಿನ ಒಳಗೆ ಕುಳಿತಿದ್ದ ಅರ್ಚಕರು ಸೇರಿದಂತೆ ಸಾವಿರಾರು ಭಕ್ತರು ಪವಾಡ ಸದೃಶ ಎಂಬಂತೆ ಪಾರಾಗಿದ್ದರು. ಆದರೆ ಇದೀಗ ಈ ಘಟನೆ ಮಾತ್ರ ತುಳುನಾಡಿನ ಕಾರ್ಣಿಕ ದೈವದ (Daiva) ರೋಷಾವೇಷಕ್ಕೆ ಕಾರಣವಾಗಿದೆ. ಈ ಬಗ್ಗೆ ದೈವರಾಧಕ ತಮ್ಮಣ್ಣ ಶೆಟ್ಟಿ ಜೊತೆ ನಮ್ಮ ಪ್ರತಿನಿಧಿ ಅಶೋಕ್ ನಡೆಸಿರುವ ಮಾತುಕತೆ ಇಲ್ಲಿದೆ. ಇಂತಹ ಘಟನೆಗಳು ತುಳುನಾಡಿನಲ್ಲಿ ಸಂಭವಿಸಬಾರದಿತ್ತು. ರಥ ಬಿದ್ದ ವಿಚಾರ ಜಾರಂದಾಯ ದೈವಕ್ಕೆ ಕೋಪ ಬಂದಿದೆ. ನನ್ನ ತಾಯಿಯ(ದುರ್ಗಾಪರಮೇಶ್ವರಿ) ಪರಿಸ್ಥಿತಿ ಹೀಗಾಗಲು ನೀವು ಕಾರಣ ಎಂದು ದೈವ ಆಕ್ರೋಶಗೊಂಡಿದೆ. ದೇವಸ್ಥಾನಕ್ಕೆ ಒಳಪಟ್ಟ ಅನೇಕರು ಮಾಡಿದ ತಪ್ಪಿನಿಂದ ಹೀಗಾಗಿದೆ. ಮುಂದೆ ಸರಿಮಾಡಿಕೊಳ್ಳದಿದ್ದರೆ ದೊಡ್ಡ ಅನಾಹುತವಾಗುತ್ತೆ ಎಂದು ದೈವ ಸೂಚನೆ ನೀಡಿದೆ. ಇದು ಮಾಡಿದ ತಪ್ಪನ್ನ ತಿದ್ದಿಕೊಳ್ಳುವ ಅವಕಾಶ ಎಂದರು.

ಬಪ್ಪನಾಡಿಗೆ ಮಾತ್ರವಲ್ಲ ಇಡಿ ದಕ್ಷಿಣ ಕನ್ನಡಕ್ಕೆ ಇದೊಂದು ಸೂಚನೆ. ದೈವರಾಧನೆ ದಾರಿ ತಪ್ಪುತ್ತಿದೆ ದಕ್ಷಿಣ ಕನ್ನಡಕ್ಕೆ ಎಚ್ಚರಿಕೆಯಿದು. ದೈವರಾಧನೆಯಲ್ಲಿ ಅಹಂಕಾರ, ಪ್ರತಿಷ್ಠೆ ಬಿಡು ಎಂದು ದೈವ ಸಂದೇಶ ನೀಡಿದೆ. ತುಳುನಾಡಿನಲ್ಲಿ ದೇವಸ್ಥಾನಗಳಿಗೂ, ದೈವರಾಧನೆಗೂ ಅವಿನಭಾವ ಸಂಬಂಧವಿದೆ. ಇಲ್ಲಿ ಯಾವುದೇ ದೇವಸ್ಥಾನಗಳ ಉತ್ಸವಾಧಿಗಳನ್ನು ದೈವಗಳೆ ಮುಂದೆ ನಿಂತು‌ ಮಾಡಿಸೋದು. ಹೀಗಾಗಿ ದೈವಗಳಿಗೆ ಸಾಕಷ್ಟು ಮಹತ್ವವಿದೆ ಎಂದು ಹೇಳಿದರು.

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More