ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ; ಪ್ರಸಿದ್ಧ ದೇವಾಲಯಕ್ಕೆ ಭೇಟಿ

|

Updated on: Oct 18, 2024 | 2:11 PM

ಹೆಚ್​ಪಿಝಡ್ ಆ್ಯಪ್ ಹಗರಣದಲ್ಲಿ ತಮನ್ನಾ ಭಾಟಿಯಾ ಅವರ ಹೆಸರು ತಣುಕುಹಾಕಿಕೊಂಡಿದೆ. ಈ ಕೇಸ್​ನಲ್ಲಿ ತಮನ್ನಾ ಅವರನ್ನು ಆರೋಪಿಯಾಗಿ ವಿಚಾರಣೆ ನಡೆಸಿಲ್ಲ. ಬದಲಿಗೆ, ಅವರು ಈ ಆ್ಯಪ್ ಪ್ರಚಾರ ಮಾಡಿದ್ದಕ್ಕಾಗಿ ತನಿಖೆ ಎದುರಿಸುವಂತಾಗಿದೆ. ಈ ಬೆನ್ನಲ್ಲೇ ಅವರು ದೇವಾಲಯಕ್ಕೆ ಭೇಟಿ ಕೊಟ್ಟಿದ್ದಾರೆ.

ಬಾಲಿವುಡ್ ನಟಿ ತಮನ್ನಾ ಭಾಟಿಯಾಗೆ ಸಂಕಷ್ಟ ಎದುರಾಗಿದೆ. ನಟಿ ತಮನ್ನಾ ಭಾಟಿಯಾ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಇದರ ವಿಚಾರಣೆ ಬಳಿಕ ಅವರು ಗುವಾಹಟಿಯ ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:10 pm, Fri, 18 October 24

Follow us on