ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ; ಪ್ರಸಿದ್ಧ ದೇವಾಲಯಕ್ಕೆ ಭೇಟಿ

Updated on: Oct 18, 2024 | 2:11 PM

ಹೆಚ್​ಪಿಝಡ್ ಆ್ಯಪ್ ಹಗರಣದಲ್ಲಿ ತಮನ್ನಾ ಭಾಟಿಯಾ ಅವರ ಹೆಸರು ತಣುಕುಹಾಕಿಕೊಂಡಿದೆ. ಈ ಕೇಸ್​ನಲ್ಲಿ ತಮನ್ನಾ ಅವರನ್ನು ಆರೋಪಿಯಾಗಿ ವಿಚಾರಣೆ ನಡೆಸಿಲ್ಲ. ಬದಲಿಗೆ, ಅವರು ಈ ಆ್ಯಪ್ ಪ್ರಚಾರ ಮಾಡಿದ್ದಕ್ಕಾಗಿ ತನಿಖೆ ಎದುರಿಸುವಂತಾಗಿದೆ. ಈ ಬೆನ್ನಲ್ಲೇ ಅವರು ದೇವಾಲಯಕ್ಕೆ ಭೇಟಿ ಕೊಟ್ಟಿದ್ದಾರೆ.

ಬಾಲಿವುಡ್ ನಟಿ ತಮನ್ನಾ ಭಾಟಿಯಾಗೆ ಸಂಕಷ್ಟ ಎದುರಾಗಿದೆ. ನಟಿ ತಮನ್ನಾ ಭಾಟಿಯಾ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಇದರ ವಿಚಾರಣೆ ಬಳಿಕ ಅವರು ಗುವಾಹಟಿಯ ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Oct 18, 2024 02:10 PM
Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More