ತಮಿಳುನಾಡು ಚುನಾವಣೆ ಫಲಿತಾಂಶಕ್ಕೂ ಮುನ್ನ ಶಿರಡಿ ಸಾಯಿಬಾಬಾ ದರ್ಶನ ಪಡೆದ ವಿಜಯ್
ತಮಿಳು ಚಿತ್ರರಂಗದ ಪ್ರಮುಖ ನಟರಲ್ಲಿ ನಟ ವಿಜಯ್ ಕೂಡ ಒಬ್ಬರು. ಅವರು ಇತ್ತೀಚೆಗೆ ನಡೆದ ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಚುನಾವಣಾ ಫಲಿತಾಂಶಗಳು ಮೇ 4ರಂದು ಹೊರಬರಲಿವೆ. ಈ ಹಿನ್ನೆಲೆಯಲ್ಲಿ ವಿಜಯ್ ನಿರಂತರವಾಗಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ತಮ್ಮ ಪಕ್ಷದ ಪರವಾಗಿ ಏಕಾಂಗಿಯಾಗಿ ಸ್ಪರ್ಧಿಸಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶಗಳು 5 ದಿನಗಳಲ್ಲಿ ಹೊರಬೀಳಲಿದೆ. ಇಂದು ನಟ ವಿಜಯ್ ಶಿರಡಿಯ ಸಾಯಿಬಾಬಾ ದೇವಸ್ಥಾನದಲ್ಲಿ ದರ್ಶನ ಪಡೆದರು. ಇದಕ್ಕೆ ಸಂಬಂಧಿಸಿದ ವೀಡಿಯೊಗಳು ಪ್ರಸ್ತುತ ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ.
ಶಿರಡಿ, ಏಪ್ರಿಲ್ 29: ತಮಿಳುನಾಡು ವಿಧಾನಸಭಾ ಚುನಾವಣೆ (Tamil Nadu Assembly Elections) ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ. ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶಕ್ಕೂ ಮುನ್ನ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ (Vijay) ಇಂದು ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಸಾಮಾಜಿಕ ಮಾಧ್ಯಮಗಳಲ್ಲಿ ವಿಜಯ್ ಅವರ ಈ ವಿಡಿಯೋ ವೈರಲ್ ಆಗಿವೆ. ದೇವರಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ವಿಜಯ್ ದೇವಾಲಯದ ಅಧಿಕಾರಿಗಳಿಂದ ಪ್ರಸಾದ ಸ್ವೀಕರಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us

