ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ತಮಿಳುನಾಡು ಸಿಎಂ ವಿಜಯ್
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಗುಲಕ್ಕೆ ಆಗಮಿಸಿದ ಮುಖ್ಯಮಂತ್ರಿ ವಿಜಯ್ ಅವರನ್ನು ದೇಗುಲದ ಆಡಳಿತ ಮಂಡಳಿ ಮತ್ತು ಅರ್ಚಕರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ, ಮುಖ್ಯಮಂತ್ರಿ ವಿಜಯ್ ಅವರು ಸಂಕಲ್ಪ ಮಾಡಿ, ಧಾರ್ಮಿಕ ವಿಧಿವಿಧಾನಗಳ ಪ್ರಕಾರ ವಿಶೇಷ ಪೂಜೆಗಳಲ್ಲಿ ಭಾಗಿಯಾಗಿದ್ದಾರೆ.
ಉಡುಪಿ, ಜೂನ್ 12: ತಮಿಳುನಾಡು ಸಿಎಂ ವಿಜಯ್ ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ದೇವಾಲಯಕ್ಕೆ ಭೇಟಿ ನೀಡಿದ್ದು, ಮೂಕಾಂಬಿಕಾ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಗುಲದ ಪ್ರಧಾನ ಅರ್ಚಕ ರಾಮಚಂದ್ರ ಅಡಿಗರು ಪೂಜೆಗೆ ಸಂಕಲ್ಪ ನೆರವೇರಿಸಿದ್ದು, ದೇವಸ್ಥಾನದ ಅರ್ಚಕರು ಸಿಎಂ ವಿಜಯ್ ಕೈಗೆ ರಕ್ಷಾ ದಾರ ಕಟ್ಟಿದ್ದಾರೆ. ಈ ವೇಳೆ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ದೇಗುಲಕ್ಕೆ ಆಗಮಿಸಿದ ತಮಿಳುನಾಡು ಸಿಎಂಗೆ ಬೊಕ್ಕೆ ನೀಡಿ ಅರ್ಚಕರು ಸ್ವಾಗತಿಸಿದ್ದು, ರಾಜ್ಯ ಸರ್ಕಾರದ ವತಿಯಿಂದ ಕುಂದಾಪುರ ಎಸಿ ರಶ್ಮಿ ಕೂಡ ವಿಜಯ್ರನ್ನು ದೇಗುಲಕ್ಕೆ ಬರಮಾಡಿಕೊಂಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
