ಕೃಷ್ಣಗಿರಿ: ವಾಲಿಬಾಲ್ ಕೋಚ್ನ ವಾಚ್ ಕದ್ದ ಆರೋಪದ ಮೇಲೆ ವಾಲಿಬಾಲ್ ತರಬೇತುದಾರನೊಬ್ಬ ವಿದ್ಯಾರ್ಥಿನಿಯ ಮೇಲೆ ಸಾರ್ವಜನಿಕವಾಗಿಯೇ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಬಿಡುಗಡೆಯಾಗಿದ್ದು, ಸಂಚಲನ ಮೂಡಿಸಿದೆ. ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ಸರ್ಕಾರಿ ಅನುದಾನಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಅಕ್ಟೋಬರ್ 23ರಂದು ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಖಾಸಗಿ ಶಾಲೆಯ ವಿದ್ಯಾರ್ಥಿಯೊಬ್ಬಳು ಶಿಕ್ಷಕರ ವಾಚ್ ಕದ್ದ ಆರೋಪ ಎದುರಿಸಿದ್ದಳು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ