ವಾಚ್ ಕಳ್ಳತನ ಮಾಡಿದಳೆಂದು ವಿದ್ಯಾರ್ಥಿನಿ ಮೇಲೆ ವಾಲಿಬಾಲ್ ಕೋಚ್ ಹಲ್ಲೆ

|

Updated on: Oct 28, 2024 | 6:51 PM

ವಾಲಿಬಾಲ್ ಕೋಚ್ ವಿದ್ಯಾರ್ಥಿಯ ತಾಯಿಗೆ ವಿಷಯ ತಿಳಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ಹೋಗಿದ್ದು, ಸಾರ್ವಜನಿಕರ ಎದುರಲ್ಲೇ ಆತ ವಿದ್ಯಾರ್ಥಿನಿಯ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಶಿಕ್ಷಕ-ವಿದ್ಯಾರ್ಥಿ ಸಂಬಂಧಗಳ ಬಗ್ಗೆ ಕಳವಳವನ್ನು ಹೆಚ್ಚಿಸಿವೆ.

ಕೃಷ್ಣಗಿರಿ: ವಾಲಿಬಾಲ್ ಕೋಚ್​ನ ವಾಚ್ ಕದ್ದ ಆರೋಪದ ಮೇಲೆ ವಾಲಿಬಾಲ್ ತರಬೇತುದಾರನೊಬ್ಬ ವಿದ್ಯಾರ್ಥಿನಿಯ ಮೇಲೆ ಸಾರ್ವಜನಿಕವಾಗಿಯೇ ಹಲ್ಲೆ ನಡೆಸಿರುವ ಘಟನೆ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಬಿಡುಗಡೆಯಾಗಿದ್ದು, ಸಂಚಲನ ಮೂಡಿಸಿದೆ. ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ಸರ್ಕಾರಿ ಅನುದಾನಿತ ಬಾಲಕಿಯರ ಪ್ರೌಢಶಾಲೆಯಲ್ಲಿ ಅಕ್ಟೋಬರ್ 23ರಂದು ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಖಾಸಗಿ ಶಾಲೆಯ ವಿದ್ಯಾರ್ಥಿಯೊಬ್ಬಳು ಶಿಕ್ಷಕರ ವಾಚ್ ಕದ್ದ ಆರೋಪ ಎದುರಿಸಿದ್ದಳು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us on