Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ

ಮದನ್​ ಕುಮಾರ್​
|

Updated on: Apr 10, 2025 | 10:50 PM

ಡಾಲಿ ಧನಂಜಯ ಅವರು ‘ವಿದ್ಯಾಪತಿ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಅವರ ಸ್ನೇಹಿತ ನಾಗಭೂಷಣ್ ಹೀರೋ ಆಗಿ ನಟಿಸಿದ್ದಾರೆ. ಸಿನಿಮಾ ನೋಡಿದ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾ ಬಗ್ಗೆ ಹಿರಿಯ ನಟಿ ತಾರಾ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..

ನಟಿ ತಾರಾ ಅನುರಾಧಾ ಅವರು ‘ವಿದ್ಯಾಪತಿ’ (Vidyapati) ಸಿನಿಮಾ ನೋಡಿದ್ದಾರೆ. ಪ್ರೀಮಿಯರ್ ಶೋ ಬಳಿಕ ಅವರು ತಮ್ಮ ಅನಿಸಿಕೆ ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ನಾಗಭೂಷಣ (Nagabhushana), ಮಲೈಕಾ ವಸುಪಾಲ್ ಮುಂತಾದವರು ನಟಿಸಿದ್ದಾರೆ. ನಾಗಭೂಷಣ ಪ್ರತಿಭೆಯನ್ನು ತಾರಾ ಹೊಗಳಿದ್ದಾರೆ. ‘ನಾಗು ಜೊತೆ ಬಡವ ರಾಸ್ಕಲ್ ಸಿನಿಮಾದಲ್ಲಿ ನಾನು ಒಂದು ದೃಶ್ಯದಲ್ಲಿ ನಟಿಸಿದ್ದಾಗಲೇ ಇವನು ಸಖತ್ ಕಲಾವಿದ ಅಂತ ಧನಂಜಯ್​ಗೆ ಹೇಳಿದ್ದೆ. ಅದನ್ನು ಅವನು ಟಗರು ಪಲ್ಯ ಸಿನಿಮಾದಲ್ಲಿ ಸಾಬೀತು ಮಾಡಿದ. ಈಗ ಈ ಸಿನಿಮಾದಲ್ಲಿ ಗಟ್ಟಿಯಾದ. ಡಾಲಿಗೆ ಈ ಸಿನಿಮಾದಿಂದ ಯಶಸ್ಸು ಸಿಗಲಿ. ನಾಗುಗೆ ಹೆಸರು ತಂದುಕೊಡಲಿ’ ಎಂದು ತಾರಾ (Tara Anuradha) ಅವರು ಹಾರೈಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.