ಹನಿ ಟ್ರ್ಯಾಪ್ ಮಾಡಲು ಬಂದವರ ಜೊತೆ ಸಚಿವನ ವಾಗ್ವಾದ ನಡೆದಿರೋದು ಸತ್ಯ: ಸತೀಶ್ ಜಾರಕಿಹೊಳಿ
ಹನಿ ಟ್ರ್ಯಾಪಿಂಗ್ ಕೃತ್ಯ ಯಾರಿಂದ ನಡೆಯುತ್ತಿದೆ ಇದರ ಹಿಂದೆ ಯಾರಿದ್ದಾರೆ ಅಂತ ತಾನು ಹೇಳಿದರೆ ಅದು ರಾಜಕೀಯ ಪ್ರೇರಿತ ಆರೋಪ ಅನಿಸಿಕೊಳ್ಳುತ್ತದೆ, ತನಿಖೆ ನಡೆದು ಏಜೆನ್ಸಿಯು ಸತ್ಯವನ್ನು ಹೊರಗೆಡಹಿದರೆ ಅದು ಪಕ್ಕಾ ಸಾಬೀತಾದ ಹಾಗೆ ಅಗುತ್ತದೆ, ಇದನ್ನು ಸ್ವಪಕ್ಷೀಯರೇ ಮಾಡಿರಬಹುದು ಅಥವಾ ಬೇರೆ ಪಕ್ಷದವರು-ಒಟ್ಟಿನಲ್ಲಿ ತಮ್ಮ ತಂಡದ ಒಂದು ವಿಕೆಟ್ ಉರುಳಿಸುವ ಪ್ರಯತ್ನವಂತೂ ನಡೆದಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಬೆಂಗಳೂರು, ಮಾರ್ಚ್ 20: ಸಚಿವರೊಬ್ಬರನ್ನು ಹನಿ ಟ್ರ್ಯಾಪ್ (honey trap) ಮಾಡಲು ನಡೆದಿರುವ ಪ್ರಯತ್ನ ರಾಜ್ಯದೆಲ್ಲಡೆ ಚರ್ಚೆಯಾಗುತ್ತಿದೆ. ಪ್ರಕರಣದ ಸ್ವಲ್ಪ ಮಾಹಿತಿ ಹೊಂದಿರುವ ಸಚಿವ ಸತೀಶ್ ಜಾರಕಿಹೊಳಿ, ಇಬ್ಬರು ಸಚಿವರನ್ನು ಹನಿಟ್ರ್ಯಾಪ್ ಮಾಡುವ ಪ್ರಯತ್ನವೆಂದು ತಾನು ಹೇಳಿಲ್ಲ, ಅದರೆ ಒಬ್ಬ ಸಚಿವನ ವಿರುದ್ಧ ಎರಡು ಸಲ ಅದನ್ನು ಮಾಡುವ ಪ್ರಯತ್ನ ನಡೆದಿದೆ ಎನ್ನುತ್ತಾರೆ. ನಮ್ಮ ವರದಿಗಾರನೊಂದಿಗೆ ಮಾತಾಡಿರುವ ಜಾರಕಿಹೊಳಿ, ಸಚಿವನ ರಾಜಕೀಯ ತೇಜೋವಧೆ ಮಾಡಲು ಈ ಪ್ರಯತ್ನ ನಡೆದಿರಬಹುದು, ಅವರು ಎರಡನೇ ಸಲ ಟ್ರ್ಯಾಪ್ ಮಾಡಲು ಬಂದಾಗ ಅವರೊಂದಿಗೆ ಸಚಿವನ ವಾಗ್ವಾದವೂ ನಡೆದಿದೆ ಎಂದು ಜಾರಕಿಹೊಳಿ ಹೇಳಿದರು. ಯಾವುದಕ್ಕೂ ಟಾರ್ಗೆಟ್ ಆಗಿರುವ ಸಚಿವ ದೂರು ಸಲ್ಲಿಸಿದರೆ ಎಲ್ಲವೂ ನಿಚ್ಚಳವಾಗುತ್ತದೆ ಎಂದು ಸಚಿವ ಹೇಳಿದರು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಸಚಿವರೊಬ್ಬರು ಹನಿಟ್ರ್ಯಾಪ್ ಅಗಿರುವ ವಿಚಾರ ಗೊತ್ತಿಲ್ಲ, ಮಾಹಿತಿಯಿಲ್ಲದೆ ತೇಜೋವಧೆ ಮಾಡೋದು ಸರಿಯಲ್ಲ: ಬಾಲಕೃಷ್ಣ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?

