ದರ್ಶನ್​ಗೆ ಜೈಲಲ್ಲೇ ಮದುವೆ ಆಮಂತ್ರಣ ಕೊಟ್ಟ ನಿರ್ದೇಶಕ ತರುಣ್ ಸುಧೀರ್

Updated on: Jul 19, 2024 | 12:42 PM

ಜೈಲನಲ್ಲಿರೋ ದರ್ಶನ್​ನ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ ಭೇಟಿ ಮಾಡಿದ್ದಾರೆ. ದರ್ಶನ್ ಜೈಲು ಸೇರಿದ ನಂತರ ಮೊದಲ ಬಾರಿಗೆ ಅವರನ್ನು ತರುಣ್ ಭೇಟಿ ಮಾಡಿದ್ದಾರೆ. ಈ ವೇಳೆ ಅವರು ಮದುವೆ ಆಮಂತ್ರಣವನ್ನು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಸದ್ಯ ಅವರು ಜೈಲಿನಲ್ಲಿ ಇದ್ದಾರೆ. ಅವರನ್ನು ನೋಡಲು ಅನೇಕ ಸೆಲೆಬ್ರಿಟಿಗಳು ಬರುತ್ತಿದ್ದಾರೆ. ಕೆಲವರಿಗೆ ಅವರನ್ನು ನೋಡೋಕೆ ಅವಕಾಶ ಸಿಗುತ್ತಿದೆ. ಇನ್ನೂ ಕೆಲವರು ಕಾದು ಹಾಗೆಯೇ ಹೋಗುತ್ತಿದ್ದಾರೆ. ಈಗ ಜೈಲನಲ್ಲಿರೋ ದರ್ಶನ್​ನ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ ಭೇಟಿ ಮಾಡಿದ್ದಾರೆ. ದರ್ಶನ್ ಜೈಲು ಸೇರಿದ ನಂತರ ಮೊದಲ ಬಾರಿಗೆ ಅವರನ್ನು ತರುಣ್ ಭೇಟಿ ಮಾಡಿದ್ದಾರೆ. ತರುಣ್ ಸುಧೀರ್ ಅವರು ಆಗಸ್ಟ್ 10-11ರಂದು ಮದುವೆ ಆಗಲಿದ್ದಾರೆ. ನಟಿ ಸೋನಲ್ ಮೊಂತೇರೋ ಅವರನ್ನು ವರಿಸಲಿದ್ದಾರೆ. ತಮ್ಮ ಮದುವೆ ಆಮಂತ್ರಣವನ್ನು ದರ್ಶನ್​ಗೆ ತರುಣ್ ನೀಡಿದ್ದಾರೆ ಎನ್ನಲಾಗಿದೆ. ದರ್ಶನ್ ಜೈಲಿನಲ್ಲಿ ಇರುವ ಕಾರಣ ಮದುವೆಯನ್ನು ಮುಂದಕ್ಕೆ ಹಾಕಲು ತರುಣ್ ಯೋಚಿಸಿದ್ದರು. ಆದರೆ, ಹಿರಿಯರು ಹಾಗೂ ದರ್ಶನ್ ಸಲಹೆ ಮೇರೆಗೆ ಮದುವೆಗೆ ತರುಣ್ ಮುಂದಾಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More