ಮೈಸೂರು, ಆ.28: ಮೈಸೂರಿನಲ್ಲಿ ನಡೆದ ಕೆಡಿಪಿ ಸಭೆಯ(KDP Meeting) ಆರಂಭದಲ್ಲಿ ಸ್ವಾರಸ್ಯಕರ ಘಟನೆ ನಡೆದಿದೆ. ನಮ್ಮ ಬಗ್ಗೆ ಬೈಯ್ಯುವವರಿಗೂ ಸ್ವಾಗತ, ಹೊಗಳುವವರಿಗೂ ಸ್ವಾಗತ ಎಂದು ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹಗೆ(Pratap Simha) ಸಿಎಂ ಸಿದ್ದರಾಮಯ್ಯ(Siddaramaiah) ಸ್ವಾರಸ್ಯಕರವಾಗಿ ಸ್ವಾಗತಿಸಿದರು. ಸಿಎಂ ಸಿದ್ದರಾಮಯ್ಯ, ಸಚಿವ ಮಹದೇವಪ್ಪ, ಶಾಸಕ ತನ್ವೀರ್ ಸೇಠ್, ಸಂಸದ ಪ್ರತಾಪ್ ಸಿಂಹ ನಡುವೆ ಸಭೆಯ ಆರಂಭದಲ್ಲಿ ಮಾತುಕತೆ ನಡೆಯಿತು. ಈ ವೇಳೆ ಸಂಸದ ಪ್ರತಾಪ್ ಸಿಂಹಗೆ ಬಯ್ಯುವವರಿಗೂ ಸ್ವಾಗತ ಹೊಗಳುವವರಿಗೂ ಸ್ವಾಗತ ಎಂದು ಸಿದ್ದರಾಮಯ್ಯ ಹೇಳಿದರು.
ಮೈಸೂರು ಜಿ.ಪಂ. ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಡಿಪಿ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ H.C.ಮಹದೇವಪ್ಪ, ಸಂಸದ ಪ್ರತಾಪ ಸಿಂಹ, ಶಾಸಕರಾದ ತನ್ವೀರ್ ಸೇಠ್, ಅನಿಲ್ ಚಿಕ್ಕಮಾದು, ಜಿ.ಡಿ.ಹರೀಶ್ ಗೌಡ, ಶ್ರೀವತ್ಸ, ದರ್ಶನ್ ಧ್ರುವನಾರಾಯಣ್, ರವಿಶಂಕರ್, ಎಂಎಲ್ಸಿಗಳಾದ ವಿಶ್ವನಾಥ್, ಮರಿತಿಬ್ಬೇಗೌಡ, ಮಂಜೇಗೌಡ, ತಿಮ್ಮಯ್ಯ, ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ