Chikmagalur: ಒಂದೇ ಶಾಲೆಯಲ್ಲಿ 23-ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕರಿಗೆ ವಿದ್ಯಾರ್ಥಿಗಳಿಂದ ಹೃದಯಸ್ಪರ್ಶಿ ಬೀಳ್ಕೊಡುಗೆ

ಅರುಣ್​ ಕುಮಾರ್​ ಬೆಳ್ಳಿ

Updated on: Jul 04, 2023 | 12:34 PM

ಶಿಕ್ಷಕ ಲಕ್ಷ್ಮಣ್ ಸೇವೆಯ ಕೊನೆದಿನವನ್ನು ಶಾಲಾ ವಿದ್ಯಾರ್ಥಿಗಳು ಸ್ಮರಣೀಯವಾಗಿಸಿದರು ಅಂತ ಹೇಳಿದರೆ ಉತ್ಪ್ರೇಕ್ಷೆ ಅನಿಸದು.

ಚಿಕ್ಕಮಗಳೂರು: ಸೇವೆಯಿಂದ ನಿವೃತ್ತಿ ಹೊಂದಿದ ಶಿಕ್ಷಕರೊಬ್ಬರಿಗೆ ವಿದ್ಯಾರ್ಥಿಗಳಿಂದ ಇದಕ್ಕೂ ಮಿಗಿಲಾದ ಉಡುಗೊರೆ ಸಿಗಲಾರದು. ಜಿಲ್ಲೆಯ ತರೀಕೆರೆ ತಾಲ್ಲೂಕಿನ ಹಳಿಯೂರು (Haliyur) ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ 23 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಶಿಕ್ಷಕ ಲಕ್ಷ್ಮಣ್ ಎನ್ ವಿ (Laxman NV) ಅವರಿಗೆ ಮಕ್ಕಳು ವಿದಾಯ ಹೇಳಿದ ವಿಧಾನ ಹೃದಯಸ್ಪರ್ಶಿಯಾಗಿತ್ತು. ಸೇವೆಯ ಕೊನೆಯ ದಿನ ಶಾಲೆಗೆ ನಡೆದು ಬಂದಾಗ ಅವರ ಮೇಲೆ ಮಕ್ಕಳು ಮೇಲೆ ಪುಷ್ಪಾರ್ಚನೆ ಮಾಡಿದರು. ಬಳಿಕ ಎತ್ತಿನ ಬಂಡಿಯೊಂದರಲ್ಲಿ ಶಿಕ್ಷಕರ ಮೆರವಣಿಗೆ (procession) ನಡೆಸಲಾಯಿತು. ಮೆರವವಣಿಗೆಯಲ್ಲಿ ಮಕ್ಕಳೇ ತಮಟೆ ಬಾರಿಸಿದ್ದು ವಿಶೇಷವಾಗಿತ್ತು. ಶಿಕ್ಷಕ ಲಕ್ಷ್ಮಣ್ ಸೇವೆಯ ಕೊನೆದಿನವನ್ನು ಶಾಲಾ ವಿದ್ಯಾರ್ಥಿಗಳು ಸ್ಮರಣೀಯವಾಗಿಸಿದರು ಅಂತ ಹೇಳಿದರೆ ಉತ್ಪ್ರೇಕ್ಷೆ ಅನಿಸದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.