AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್‌ನಲ್ಲಿ ಏನು ಮಾಡುತ್ತೇವೆ ಎಂಬುದನ್ನು 20 ದಿನ ಮುಂಚೆಯೇ ಬರೆದುಕೊಟ್ಟಿದ್ದ ರಿಂಕು- ತಿಲಕ್

India Wins Asia Cup 2025: 2025ರ ಏಷ್ಯಾಕಪ್ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದೆ. ಈ ಐತಿಹಾಸಿಕ ಗೆಲುವಿನಲ್ಲಿ ತಿಲಕ್ ವರ್ಮಾ ಅವರ ಮಹತ್ವದ ಅರ್ಧಶತಕ ಹಾಗೂ ರಿಂಕು ಸಿಂಗ್ ಅವರ ವಿನ್ನಿಂಗ್ ಬೌಂಡರಿ ನಿರ್ಣಾಯಕ ಪಾತ್ರ ವಹಿಸಿದವು. ವಿಶೇಷವೆಂದರೆ, ಇವರಿಬ್ಬರೂ ಪಂದ್ಯಕ್ಕೂ ಮುನ್ನ ತಾವು ಹೀಗೆಯೇ ಆಡುತ್ತೇವೆ ಎಂದು ಬರೆದುಕೊಂಡಿದ್ದು, ಅದು ನಿಜವಾಗಿ ಭಾರತಕ್ಕೆ ವಿಜಯ ತಂದುಕೊಟ್ಟಿದೆ.

ಪೃಥ್ವಿಶಂಕರ
|

Updated on: Sep 29, 2025 | 8:23 PM

Share

2025 ರ ಏಷ್ಯಾಕಪ್ ಗೆದ್ದಿರುವ ಟೀಂ ಇಂಡಿಯಾ ಸಂತಸದ ಅಲೆಯಲ್ಲಿ ತೇಲುತ್ತಿದೆ. ಅದರಲ್ಲೂ ಫೈನಲ್‌ನಲ್ಲಿ ಪಾಕಿಸ್ತಾನವನ್ನು ಸೋಲಿಸಿರುವುದು ಇಡೀ ಭಾರತದಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿ ಮಾಡಿದೆ. ತಂಡದ ಈ ಗೆಲುವಿನಲ್ಲಿ ಎಲ್ಲಾ ಆಟಗಾರರ ಪ್ರದರ್ಶನ ಪ್ರಮುಖವಾಗಿತ್ತು. ಅದರಲ್ಲೂ ತಂಡ ಸಂಕಷ್ಟದಲ್ಲಿದ್ದಾಗ ಒತ್ತಡವನ್ನು ನಿಯಂತ್ರಿಸಿಕೊಂಡು ಅರ್ಧಶತಕ ಬಾರಿಸುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದ ತಿಲಕ್ ವರ್ಮಾ ಹಾಗೂ ಕೊನೆಯ ಓವರ್​ನಲ್ಲಿ ಬ್ಯಾಟಿಂಗ್​ಗೆ ಬಂದು ಎದುರಿಸಿದ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸಿದ ರಿಂಕು ಸಿಂಗ್​ಗೆ ವಿಶೇಷ ಮನ್ನಣೆ ಸಿಗಲೇಬೇಕು. ಅಚ್ಚರಿಯ ಸಂಗತಿಯೆಂದರೆ ಟೂರ್ನಿ ಆರಂಭಕ್ಕೂ ಮುನ್ನ ಫೈನಲ್ ಪಂದ್ಯದಲ್ಲಿ ನಾವಿಬ್ಬರು ಯಾವ ರೀತಿಯ ಪ್ರದರ್ಶನ ನೀಡಬೇಕು ಎಂಬುದನ್ನು ಇವರಿಬ್ಬರು ಬರೆದುಕೊಟ್ಟಿದ್ದರು. ಅದರಂತೆ ಫೈನಲ್ ಪಂದ್ಯದಲ್ಲಿ ತಾವು ಬರೆದುಕೊಟ್ಟಿದ್ದನ್ನು ಮೈದಾನದಲ್ಲಿ ಮಾಡಿ ತೋರಿಸಿರಿದ್ದಾರೆ.

ವಾಸ್ತವವಾಗಿ 2025 ರ ಏಷ್ಯಾಕಪ್ ಆರಂಭವಾಗುವ ಮೊದಲು ಅಂದರೆ ನಿಖರವಾಗಿ ಸೆಪ್ಟೆಂಬರ್ 6 ರಂದು ರಿಂಕು ಸಿಂಗ್ ಹಾಗೂ ತಿಲಕ್ ವರ್ಮಾ ಫೈನಲ್ ಪಂದ್ಯದಲ್ಲಿ ತಾವಿಬ್ಬರು ಯಾವ ರೀತಿಯ ಪ್ರದರ್ಶನ ನೀಡಬೇಕು ಎಂಬುದನ್ನು ಒಂದು ಕಾಗದದ ಮೇಲೆ ಬರೆದುಕೊಟ್ಟಿದ್ದರು. ಅದರಲ್ಲಿ ರಿಂಕು ಸಿಂಗ್ ಭಾರತ ತಂಡದ ಗೆಲುವಿನ ರನ್ ಅನ್ನು ನಾನು ಬಾರಿಸಬೇಕು ಎಂದು ಬರೆದಿದ್ದರೆ, ಇತ್ತ ತಿಲಕ್ ವರ್ಮ ಫೈನಲ್‌ನಲ್ಲಿ ದೊಡ್ಡ ಇನ್ನಿಂಗ್ಸ್ ಆಡುವುದಾಗಿ ಬರೆದಿದ್ದರು. ಇದೀಗ ಸೆಪ್ಟೆಂಬರ್ 28 ರಂದು ನಡೆದ ಫೈನಲ್ ಪಂದ್ಯದಲ್ಲಿ ತಾವಿಬ್ಬರು ಏನನ್ನು ಬರೆದುಕೊಟ್ಟಿದ್ದರೋ ಅದನ್ನೇ ಮೈದಾನದಲ್ಲಿ ಮಾಡಿ ತೋರಿಸಿದ್ದಾರೆ.

ಗಮನಿಸಬೇಕಾದ ಸಂಗತಿಯೆಂದರೆ ರಿಂಕು ಸಿಂಗ್ ಇಡೀ ಟೂರ್ನಿಯಲ್ಲಿ ಆಡಲಿಲ್ಲ. ಆದರೆ, ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರಿಂದ ಅವರಿಗೆ ಫೈನಲ್‌ನಲ್ಲಿ ಆಡುವ ಅವಕಾಶ ದೊರೆಯಿತು. ಆದಾಗ್ಯೂ, ಅವರು ಬ್ಯಾಟಿಂಗ್ ಮಾಡಲು ಬಂದಾಗ ಕೇವಲ ಒಂದು ಎಸೆತ ಮಾತ್ರ ಆಡಿದರು. ಆದರೆ ಆ ಒಂದೇ ಎಸೆತದಲ್ಲಿ ಅವರು ಫೈನಲ್‌ನಲ್ಲಿ ಟೀಂ ಇಂಡಿಯಾ ಪರ ಗೆಲುವಿನ ರನ್ ಬಾರಿಸಿ ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ದಾಖಲಿಸಿದರು. ಇತ್ತ ತಿಲಕ್ ವರ್ಮಾ 2025 ರ ಏಷ್ಯಾಕಪ್ ಫೈನಲ್‌ನಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದರು. ತಿಲಕ್ ವರ್ಮಾ 53 ​​ಎಸೆತಗಳನ್ನು ಎದುರಿಸಿ ಅಜೇಯ 69 ರನ್ ಗಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!