ವರ್ಷದ ಹಿಂದೆ ಸಾತ್ವಿಕ್​ನನ್ನು ಕೊಳವೆ ಬಾವಿಯಿಂದ ಜೀವಂತ ಹೊರತೆಗೆದ ತಂಡಕ್ಕೆ ಇನ್ನೂ ಹಣ ಸಿಕ್ಕಿಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 11, 2025 | 4:55 PM

ಈ ಪ್ರಕರಣ ಮತ್ತೊಂದು ಭಾಗವೆಂದರೆ, ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಯಂತ್ರೋಪಕರಣ, ವಾಹನ ಮತ್ತು ಜನರಿಗೆ ವಿಜಯಪುರ ಜಿಲ್ಲಾಡಳಿತ ಇದುವರೆಗೆ ಹಣ ಪಾವತಿಸಿಲ್ಲ. ಕಳೆದ ಒಂದು ವರ್ಷದಿಂದ ಜನ ಡಿಸಿ ಕಚೇರಿಗೆ ಅಲೆದಾಡುತ್ತಿದ್ದಾರೆ, ಯಾವುದೋ ಒಂದು ಸಬೂಬು ಹೇಳಿ ಅವರನ್ನು ವಾಪಸ್ಸು ಕಳಿಸಲಾಗುತ್ತದಂತೆ. ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ನಿದ್ರೆಯಲ್ಲಿರುವಂತಿದೆ.

ವಿಜಯಪುರ, ಮಾರ್ಚ್ 11: ನಿಮಗೆ ನೆನಪಿರಬಹುದು, ಕಳೆದ ವರ್ಷ ಏಪ್ರಿಲ್ 3ರಂದು ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ಕೊಳವೆ ಬಾವಿಯೊಂದರಲ್ಲಿ ಒಂದೂವರೆ ವರ್ಷದ ಸಾತ್ವಿಕ್ ಹೆಸರಿನ ಮಗು ತಲೆಕೆಳಗಾಗಿ ಬಿದ್ದಿತ್ತು. ಪಕ್ಕದ ಕ್ವಾರಿಗಳಲ್ಲಿ ಕೆಲಸ ಮಾಡುತ್ತಿದ್ದ ಜನ ಜೆಸಿಬಿ, ಹಿಟಾಚಿ ಮತ್ತು ಇತರ ಯಂತ್ರೋಪಕರಣಗಳೊಂದಿಗೆ ನೆರವಿಗೆ ಧಾವಿಸಿದ್ದರು. 22 ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ  (rescue operation) ಮಗುವನ್ನು ರಕ್ಷಿಸಲಾಗಿತ್ತು. ಬಹಳ ಅಪರೂಪದ ಪ್ರಕರಣ ಅದು, ಯಾಕೆಂದರೆ ಕೊಳವೆ ಬಾವಿಗೆ ಬೀಳುವ ಮಕ್ಕಳು ಬದುಕುಳಿದಿರುವುದು ವಿರಳ ಸಂದರ್ಭಗಳಲ್ಲಿ ಮಾತ್ರ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಸುಮಾರು 21-ಗಂಟೆ ಕಾರ್ಯಚರಣೆ ನಂತರ ಸಾತ್ವಿಕ್ ನನ್ನು ಸುರಕ್ಷಿತವಾಗಿ ಹೊರತಂದ ಎನ್ ಡಿಆರ್ ಎಫ್ ತಂಡದ ಸಾಹಸ ವರ್ಣನೆಗೆ ನಿಲುಕದ್ದು!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.