Video: ಅಮ್ಮನ ಜತೆ ಸ್ಕೂಟಿಯಲ್ಲಿ ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಹರಿದ ಟಿಪ್ಪರ್

Updated on: Jun 27, 2025 | 3:05 PM

ಅಮ್ಮನ ಜತೆ ಸ್ಕೂಟಿಯಲ್ಲಿ ಕುಳಿತು ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದ ಪರಿಣಾಮ ಅಲ್ಲೇ ಉಸಿರು ಚೆಲ್ಲಿದ್ದಾನೆ. ಗೀತಾಂಜಲಿ ಇಂಟರ್ನ್ಯಾಷನಲ್ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ಅಭಿಮಾನ್ಶು ರೆಡ್ಡಿ, ಬೆಳಗ್ಗೆ 8 ಗಂಟೆ ಸುಮಾರಿಗೆ ಸ್ಕೂಟರ್​​ನಲ್ಲಿ ತನ್ನ ತಾಯಿಯೊಂದಿಗೆ ಶಾಲೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.ಲ್ಲವಿ ಸ್ಕೂಲ್ ಜಂಕ್ಷನ್ ಬಳಿ ಟಿಪ್ಪರ್ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ತಕ್ಷಣವೇ ಸಾವನ್ನಪ್ಪಿದ್ದಾನೆ.

ತೆಲಂಗಾಣ, ಜೂನ್ 27: ಅಮ್ಮನ ಜತೆ ಸ್ಕೂಟಿಯಲ್ಲಿ ಕುಳಿತು ಶಾಲೆಗೆ ಹೊರಟಿದ್ದ ಬಾಲಕನ ಮೇಲೆ ಟಿಪ್ಪರ್ ಹರಿದ ಪರಿಣಾಮ ಅಲ್ಲೇ ಉಸಿರು ಚೆಲ್ಲಿದ್ದಾನೆ. ಗೀತಾಂಜಲಿ ಇಂಟರ್ನ್ಯಾಷನಲ್ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿ ಅಭಿಮಾನ್ಶು ರೆಡ್ಡಿ, ಬೆಳಗ್ಗೆ 8 ಗಂಟೆ ಸುಮಾರಿಗೆ ಸ್ಕೂಟರ್​​ನಲ್ಲಿ ತನ್ನ ತಾಯಿಯೊಂದಿಗೆ ಶಾಲೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಪಲ್ಲವಿ ಸ್ಕೂಲ್ ಜಂಕ್ಷನ್ ಬಳಿ ಟಿಪ್ಪರ್ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ತಕ್ಷಣವೇ ಸಾವನ್ನಪ್ಪಿದ್ದಾನೆ.

ಅಪಘಾತದ ನಂತರ ತಾಯಿ ಮಗುವನ್ನು ಕಳೆದುಕೊಂಡು ದುಃಖಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅಭಿಮಾನ್ಶು ಮಲ್ಲಂಪೇಟೆಯ ಆಕಾಶ್ ಲೇಔಟ್ ನಿವಾಸಿ ರಾಜು ಅವರ ಮಗ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More