Video: ಊರಿಗೆ ರಸ್ತೆಯಿಲ್ಲ ಎಂದು ಕೇಳಲು ಬಂದ ದಿವ್ಯಾಂಗನನ್ನು ಕಲೆಕ್ಟರ್ ಕಚೇರಿಯಿಂದ ಹೊರದಬ್ಬಿದ ಸಿಬ್ಬಂದಿ

Updated on: Aug 12, 2025 | 11:24 AM

ಊರಿಗೆ ರಸ್ತೆ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಲು ಹೋಗಿದ್ದ ದಿವ್ಯಾಂಗನನ್ನು ಕಲೆಕ್ಟರ್ ಕಚೇರಿಯಿಂದ ಸಿಬ್ಬಂದಿ ಹೊರದಬ್ಬಿದ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಾರ್ವಜನಿಕರ ಕುಂದುಕೊರತೆ ವಿಚಾರಣೆ ಸಂದರ್ಭದಲ್ಲಿ ನಡೆದ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.ಆ ವ್ಯಕ್ತಿಯನ್ನು ರಾಜ ಗಂಗಾರಾಮ್ ಎಂದು ಗುರುತಿಸಲಾಗಿದೆ. ಅವರು ಮಲ್ಲಾಪುರ ಮಂಡಲದ ಮುತ್ಯಂಪೇಟೆ ಗ್ರಾಮದ ನಿವಾಸಿ. ಕಳೆದ ಎಂಟು ವರ್ಷಗಳಿಂದ ಗಂಗಾರಾಮ್ ತಮ್ಮ ಮನೆಗೆ ರಸ್ತೆಗಾಗಿ ಮನವಿ ಮಾಡುತ್ತಿದ್ದರು.

ಹೈದರಾಬಾದ್, ಆಗಸ್ಟ್​ 12: ಊರಿಗೆ ರಸ್ತೆ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಲು ಹೋಗಿದ್ದ ದಿವ್ಯಾಂಗನನ್ನು ಕಲೆಕ್ಟರ್ ಕಚೇರಿಯಿಂದ ಸಿಬ್ಬಂದಿ ಹೊರದಬ್ಬಿದ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಾರ್ವಜನಿಕರ ಕುಂದುಕೊರತೆ ವಿಚಾರಣೆ ಸಂದರ್ಭದಲ್ಲಿ ನಡೆದ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.ಆ ವ್ಯಕ್ತಿಯನ್ನು ರಾಜ ಗಂಗಾರಾಮ್ ಎಂದು ಗುರುತಿಸಲಾಗಿದೆ.

ಅವರು ಮಲ್ಲಾಪುರ ಮಂಡಲದ ಮುತ್ಯಂಪೇಟೆ ಗ್ರಾಮದ ನಿವಾಸಿ. ಕಳೆದ ಎಂಟು ವರ್ಷಗಳಿಂದ ಗಂಗಾರಾಮ್ ತಮ್ಮ ಮನೆಗೆ ರಸ್ತೆಗಾಗಿ ಮನವಿ ಮಾಡುತ್ತಿದ್ದರು. ಅವರು ಜಿಲ್ಲಾಧಿಕಾರಿ ಸತ್ಯಪ್ರಸಾದ್ ಅವರಿಗೆ ದೂರು ಸಲ್ಲಿಸಿದ್ದಾರೆಂದು ವರದಿಯಾಗಿದೆ. ಜಿಲ್ಲಾಧಿಕಾರಿ ಈ ಕುರಿತು ಕ್ರಮ ಕೈಗೊಳ್ಳುವುದಾಗಿ ಮನವಿ ಮಾಡಿದ್ದರೂ ಯಾವುದೇ ಪ್ರಗತಿ ಕಂಡುಬಂದಿರಲಿಲ್ಲ. ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಅವರ ಬಳಿಗೆ ಬಂದಾಗ ಆ ವ್ಯಕ್ತಿ ವೀಲ್‌ಚೇರ್‌ನಲ್ಲಿ ಕುಳಿತಿರುವುದನ್ನು ಕಾಣಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Aug 12, 2025 11:23 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More