ಅಪ್ಪು ಸಮಾಧಿಗೆ ನಮಿಸಲು ಬೆಂಗಳೂರಿಗೆ ಬಂದ ಅಲ್ಲು ಅರ್ಜುನ್​; ಪುನೀತ್ ಮನೆ ಮುಂದೆ ಫ್ಯಾನ್ಸ್​ ದಂಡು

| Updated By: ಮದನ್​ ಕುಮಾರ್​

Updated on: Feb 03, 2022 | 1:11 PM

ಪುನೀತ್​ ರಾಜ್​ಕುಮಾರ್​ ನಿವಾಸಕ್ಕೆ ಭೇಟಿ ನೀಡುವ ಸಲುವಾಗಿ ಅಲ್ಲು ಅರ್ಜುನ್​ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಅಪ್ಪು ಕುಟುಂಬದ ಸದಸ್ಯರಿಗೆ ಅವರು ಸಾಂತ್ವನ ಹೇಳಲಿದ್ದಾರೆ.

ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರ ಸಮಾಧಿಗೆ ನಮನ ಸಲ್ಲಿಸಲು ನಟ ಅಲ್ಲು ಅರ್ಜನ್​ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು (ಫೆ.3) ಬೆಳಗ್ಗೆ 11 ಗಂಟೆ ಸುಮಾರಿಗೆ ಅವರು ಖಾಸಗಿ ವಿಮಾನದಲ್ಲಿ ಹೈದರಾಬಾದ್​ನಿಂದ ಹೊರಟಿದ್ದರು. 12 ಗಂಟೆಗೆ ಬೆಂಗಳೂರಿಗೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​ ನಿವಾಸಕ್ಕೆ ತೆರಳಿ ನಂತರ ಅಲ್ಲಿಂದ ಪುನೀತ್​ ರಾಜ್​ಕುಮಾರ್​ ಮನೆಗೆ ಅಲ್ಲು ಅರ್ಜುನ್​ (Allu Arjun) ಭೇಟಿ ನೀಡಲಿದ್ದಾರೆ. ಅಪ್ಪು ಕುಟುಂಬದ ಸದಸ್ಯರಿಗೆ ಅವರು ಸಾಂತ್ವನ ಹೇಳಲಿದ್ದಾರೆ. ನಂತರ ಪುನೀತ್​ ರಾಜ್​ಕುಮಾರ್​ ಅವರ ಸಮಾಧಿ ( Puneeth Rajkumar Samadhi) ಸ್ಥಳಕ್ಕೆ ಬಂದು ಅಲ್ಲು ಅರ್ಜುನ್​ ನಮನ ಸಲ್ಲಿಸಲಿದ್ದಾರೆ. ಅಪ್ಪು ನಿಧನರಾದ ಸುದ್ದಿ ತಿಳಿದಾಗ ಅವರು ಕಂಬನಿ ಮಿಡಿದಿದ್ದರು. ಪುನೀತ್​ ಮಾಡಿದ ಸಾಧನೆ ಮತ್ತು ಅವರ ವ್ಯಕ್ತಿತ್ವವನ್ನು ಅಲ್ಲು ಅರ್ಜುನ್​ ಸ್ಮರಿಸಿದ್ದರು. ಅವರಿಗೆ ಕರ್ನಾಟಕದಲ್ಲೂ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಹಾಗಾಗಿ ತಮ್ಮ ನೆಚ್ಚಿನ ನಟನನ್ನು ನೋಡಲು ಪುನೀತ್​ ರಾಜ್​ಕುಮಾರ್​ ಮನೆ ಮುಂದೆ ಅಲ್ಲು ಅರ್ಜುನ್​ ಅಭಿಮಾನಿಗಳು ಜಮಾಯಿಸಿದ್ದಾರೆ. ಈ ಹಿಂದೆ ಅವರು ‘ಪುಷ್ಪ’ ಸಿನಿಮಾದ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದಾಗಲೂ ಖಾಸಗಿ ಹೋಟೆಲ್​ ಮುಂಭಾಗದಲ್ಲಿ ಫ್ಯಾನ್ಸ್​ ಕಿಕ್ಕಿರಿದು ಸೇರಿದ್ದರು.

ಇದನ್ನೂ ಓದಿ:

ಪುನೀತ್​ ನಿವಾಸಕ್ಕೆ ಭೇಟಿ ನೀಡಲಿರುವ ಅಲ್ಲು ಅರ್ಜುನ್​; ಹೇಗಿರಲಿದೆ ಇಂದಿನ ಅವರ ವೇಳಾಪಟ್ಟಿ?

ಅಣ್ಣಾವ್ರ ಮನೆ 2 ಭಾಗ ಆದಾಗ ಪಾರ್ವತಮ್ಮ ಹೇಳಿದ್ದೇನು? ಮುಖ್ಯವಾದ ವಿಚಾರ ತಿಳಿಸಿದ ರಾಘಣ್ಣ

Follow us on