ಹನುಮನ ದರ್ಶನಕ್ಕೋಸ್ಕರ ಅಂಜನಾದ್ರಿ ಬೆಟ್ಟಕ್ಕೆ ಹೋಗುವ ಭಕ್ತರಿಗೆ ಇಂದಿನಿಂದ ಸಮಯ ನಿಗದಿ
ಆಗಸ್ಟ್ 30ರಿಂದ ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯವರಗೆ ಮಾತ್ರ ಭಕ್ತರು ಅಂಜನಾದ್ರಿ ಬೆಟ್ಟ ಹತ್ತಿ ಹನುಮನ ದರ್ಶನ ಪಡೆಯಬಹುದಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣಕ್ಕೆ ಹತ್ತಿರುವಿರುವ ಅಂಜನಾದ್ರಿ ಬೆಟ್ಟದಲ್ಲಿ (Anjanadri Betta) ಚಿರತೆಗಳ (leopard) ವಿಷಯವನ್ನು ನಾವು ಹಲವಾರು ಬಾರಿ ನಿಮ್ಮ ಗಮನಕ್ಕೆ ತಂದಿದ್ದೇವೆ. ತೀರ ಇತ್ತೀಚಿಗೆ ಅಂದರೆ ಆಗಸ್ಟ್ 12 ರಂದು ಬೆಟ್ಟದ ಮೇಲೆ ಪಾದಗಟ್ಟೆ ಬಳಿ ಚಿರತೆ ಕಾಣಿಸಿಕೊಂಡಿತ್ತು. ಈ ಹಿನೆಲೆಯಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಬೆಟ್ಟಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ (devotees) ಸಮಯವನ್ನು ನಿಗದಿಗೊಳಿಸಿದ್ದಾರೆ. ಇಂದಿನಿಂದ ಅಂದರೆ ಆಗಸ್ಟ್ 30ರಿಂದ ಬೆಳಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 3:00 ಗಂಟೆಯವರಗೆ ಮಾತ್ರ ಭಕ್ತರು ಅಂಜನಾದ್ರಿ ಬೆಟ್ಟ ಹತ್ತಿ ಹನುಮನ ದರ್ಶನ ಪಡೆಯಬಹುದಾಗಿದೆ.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

