Gruha Jyoti Scheme; ಬಾಡಿಗೆ ಮನೆಯಲ್ಲಿ ವಾಸಿಸುವವರು, ಹೊಸ ಮನೆ ಕಟ್ಟಿದವರಿಗೂ ಗೃಹಜ್ಯೋತಿ ಯೋಜನೆ ಪ್ರಯೋಜನ ಸಿಗಲಿದೆ: ಕೆಜೆ ಜಾರ್ಜ್

Updated on: Jun 10, 2023 | 11:25 AM

ಇಂಧನ ಸಚಿವ ಜಾರ್ಜ್ ಸೋಮವಾರ ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿ ಜನರ ಗೊಂದಲಗಳನ್ನು ನಿವಾರಿಸಲಿದ್ದಾರೆ.

ಬೆಂಗಳೂರು: ಗೃಹಜ್ಯೋತಿ ಗ್ಯಾರಂಟಿಗೆ ಸಂಬಂಧಿಸಿದಂತೆ ಜನರಲ್ಲಿ ಸಮಸ್ಯೆ, ಗೊಂದಲಗಳಿದ್ದರೆ, ಸೋಮವಾರ ಒಂದು ಸುದ್ದಿಗೋಷ್ಟಿ ನಡೆಸಿ ಎಲ್ಲವನ್ನು ಬಗೆಹರಿಸುವುದಾಗಿ ಇಂಧನ ಸಚಿವ ಕೆಜೆ ಜಾರ್ಜ್ (KJ George) ಹೇಳಿದರು. ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು (Siddaramaiah) ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವ ಜಾರ್ಜ್, ಎಲ್ಲ ವಿದ್ಯುತ್ ಬಳಕೆದಾರರು (consumers) 12 ತಿಂಗಳು ಬಳಸಿದ ಯೂನಿಟ್ ಗಳ ಸರಾಸರಿ ಜೊತೆಗೆ ಹೆಚ್ಚುವರಿ ಶೇಕಡ ಹತ್ತರಷ್ಟು ಯೂನಿಟ್ 200ಕ್ಕಿಂತ ಕಮ್ಮಿಯಿದ್ದರೆ ಬಿಲ್ ಪಾವತಿಸಬೇಕಿರದ ನಿಯಮ ಅನ್ವಯಿಸುತ್ತದೆ. ಹೊಸ ಮನೆ ಕಟ್ಟುವವರಿಗೆ ಮತ್ತು ಬಾಡಿಗೆ ಮನೆಯಲ್ಲಿ ವಾಸಮಾಡುವವರಿಗೂ ಗ್ರಹಜ್ಯೋತಿ ಯೋಜನೆಯ ಪ್ರಯೋಜನ ಲಭ್ಯವಾಗಲಿದೆ ಎಂದು ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More