AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ  ಹನುಮ ಮಾಲಾಧಾರಿಗಳು: ನೂಕಾಟ, ತಳ್ಳಾಟ

ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು: ನೂಕಾಟ, ತಳ್ಳಾಟ

ರಮೇಶ್ ಬಿ. ಜವಳಗೇರಾ
|

Updated on: Dec 03, 2025 | 3:43 PM

Share

ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿ ಕಡೆ ನುಗ್ಗಲು ಯತ್ನಿಸಿರುವ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಹನುಮ ಮಾಲಾಧಾರಿಗಳನ್ನು ತಡೆದು ನಿಲ್ಲಿಸಿದರು. ಇದರಿಂದ ಪೊಲೀಸರು ಹಾಗೂ ಹನುಮ ಮಾಲಾಧಾರಿಗಳ ನಡುವೆ ತಳ್ಳಾಟ, ನೂಕಾಟ ಉಂಟಾಯ್ತು. ಇದೇ ವೇಳೆ ಹನುಮ ಮಾಲಾಧಾರಿಗಳು, ಕೇಸರಿ ಧ್ವಜ ತಿರುಗಿಸಿ ಮಸೀದಿ ಜಾಗ ನಮ್ಮದು ಎಂದು ಘೋಷಣೆ ಮೊಳಗಿತು. ಅಲ್ಲದೇ ಜಾಮಿಯಾ ಮಸೀದಿಯಲ್ಲಿರುವವನು ಹನುಮಂತ ಎಂದು ಘೋಷಣೆ ಕೂಗಿ ಬೂದುಗುಂಬಳ ಇಳಿ ತೆಗೆದು ಒಡೆದರು

ಮಂಡ್ಯ, (ಡಿಸೆಂಬರ್ 03): ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳ ಸಂಕೀರ್ತನಾ ಯಾತ್ರೆ ವೇಳೆ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿ ಕಡೆ ನುಗ್ಗಲು ಯತ್ನಿಸಿರುವ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಹನುಮ ಮಾಲಾಧಾರಿಗಳನ್ನು ತಡೆದು ನಿಲ್ಲಿಸಿದರು. ಇದರಿಂದ ಪೊಲೀಸರು ಹಾಗೂ ಹನುಮ ಮಾಲಾಧಾರಿಗಳ ನಡುವೆ ತಳ್ಳಾಟ, ನೂಕಾಟ ಉಂಟಾಯ್ತು. ಇದೇ ವೇಳೆ ಹನುಮ ಮಾಲಾಧಾರಿಗಳು, ಕೇಸರಿ ಧ್ವಜ ತಿರುಗಿಸಿ ಮಸೀದಿ ಜಾಗ ನಮ್ಮದು ಎಂದು ಘೋಷಣೆ ಮೊಳಗಿತು. ಅಲ್ಲದೇ ಜಾಮಿಯಾ ಮಸೀದಿಯಲ್ಲಿರುವವನು ಹನುಮಂತ ಎಂದು ಘೋಷಣೆ ಕೂಗಿ ಬೂದುಗುಂಬಳ ಇಳಿ ತೆಗೆದು ಒಡೆದರು.

ಇನ್ನು ಹನುಮ ಮಾಲಾಧಾರಿಗಳ ಜಾಮಿಯಾ ಮಸೀದಿ ಮುಂದೆ ಕುಳಿತು ಭಜನೆ ಮಾಡಿದ್ದು, ಈ ವೇಳೆ ಪರಿಸ್ಥಿತಿ ಕೈಮೀರುತ್ತಿರುತ್ತಿದ್ದಂತೆಯೇ ಎಚ್ಚೆತ್ತ SP ಮಲ್ಲಿಕಾರ್ಜುನ ಬಾಲದಂಡಿ ಅವರು ಪ್ರವೇಶಿಸಿ ಹನುಮ ಮಾಲಾಧಾರಿಗಳ ಮನವೊಲಿಸಿದರು. ಬಳಿಕ ಹನುಮ ಮಾಲಾಧಾರಿಗಳು ಜಾಮಿಯಾ ಮಸೀದಿ ವೃತ್ತದಿಂದ ಮುಂದೆ ಸಾಗಿದರು.