ದಳಪತಿ ವಿಜಯ್​​ಗೆ ಮತ್ತೆ ಹೆಚ್ಚಿತು ಸಂಕಷ್ಟ; ಎದುರಿಸಬೇಕಿದೆ ವಿಚಾರಣೆ

Updated on: Mar 09, 2026 | 3:13 PM

ದಳಪತಿ ವಿಜಯ್ ಅವರು ಈಗ ತೊಂದರೆ ಮೇಲೆ ತೊಂದರೆ ಎದುರಿಸುತ್ತಿದ್ದಾರೆ. ಅವರ ನಟನೆಯ ‘ಜನ ನಾಯಗನ್’ ರಿಲೀಸ್ ಆಗಿಲ್ಲ. ಈ ಬೆನ್ನಲ್ಲೇ ಕರೂರು ಪ್ರಕರಣದಲ್ಲಿ ಅವರು ತೊಂದರೆ ಅನುಭವಿಸುವಂತೆ ಆಗಿದೆ. ಈ ಪ್ರಕರಣದಲ್ಲಿ ಅವರು ವಿವಾರಣೆ ಎದುರಿಸುತ್ತಿದ್ದಾರೆ. ಈಗ ಅವರಿಗೆ ವಿಚಾರಣೆಗೆ ಹಾಜರಿ ಹಾಕುವಂತೆ ಮತ್ತೆ ನೊಟಿಸ್ ಬಂದಿದೆ.

ಟಿವಿಕೆ ಸಂಸ್ಥಾಪಕ, ನಟ ವಿಜಯ್​ಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 10ರಂದು ವಿಚಾರಣೆಗೆ ಹಾಜರಾಗುವಂತೆ ವಿಜಯ್​ಗೆ ಸೂಚಿಸಲಾಗಿದೆ. ವಿಜಯ್ ಅವರ ಟಿವಿಕೆ ಪಕ್ಷ ಕರೂರಿನಲ್ಲಿ ನಡೆಸಿದ ಚುನಾವಣೆ ರ್ಯಾಲಿ ವೇಳೆ 41 ಜನರ ಸಾವನ್ನಪ್ಪಿದ್ದರು. ಈ ಕಾಲ್ತುಳಿತ ದುರಂತಕ್ಕೆ ಟಿವಿಕೆ ಹೊಣೆ ಅಲ್ಲ ಎಂದು ನಟ ವಿಜಯ್ ಹೇಳಿದ್ದಾರೆ. ಅಲ್ಲದೆ, ಡಿಎಂಕೆ ಸರ್ಕಾರದ ವೈಫಲ್ಯದಿಂದ ದುರಂತ ಸಂಭವಿಸಿತ್ತು ಎಂದು ಆರೋಪಿಸಿದ್ದಾರೆ. 41 ಜನರ ಸಾವಿಗೆ ಯಾರು ಹೊಣೆ ಎಂದು ಸಿಬಿಐನಿಂದ ವಿಚಾರಣೆ ನಡೆಯುತ್ತಿದೆ. ಅವರು ಈಗಾಗಲೇ ಹಲವು ಬಾರಿ ವಿಚಾರಣೆಯನ್ನು ಎದುರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us