ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸುಧೀರ್​ ಸಂತಾಪ

Updated on: Jan 15, 2025 | 8:41 PM

ಹಿರಿಯ ನಟ ಸರಿಗಮ ವಿಜಿ ಅವರು ಅನಾರೋಗ್ಯದಿಂದ ನಿಧನರಾಗಿದ್ದು, ಅನೇಕ ಸೆಲೆಬ್ರಿಟಿಗಳು ಅಂತಿಮ ದರ್ಶನ ಪಡೆದಿದ್ದಾರೆ. ಸರಿಗಮ ವಿಜಿ ಜೊತೆ ಸುಧೀರ್​ ಕುಟುಂಬದವರು ಆಪ್ತವಾಗಿದ್ದರು. ನಿರ್ದೇಶಕ ತರುಣ್ ಸುಧೀರ್​ ಅವರು ಭಾವುಕವಾಗಿ ಮಾತನಾಡಿದ್ದಾರೆ. ಸರಿಗಮ ವಿಜಿ ಜೊತೆ ತಮಗೆ ಇದ್ದ ಒಡನಾಟವನ್ನು ತರುಣ್ ಸುಧೀರ್​ ನೆನಪಿಸಿಕೊಂಡಿದ್ದಾರೆ.

ಸರಿಗಮ ವಿಜಿ ಅವರು ನಮಗೆ ತಂದೆ ಸಮಾನರು. ಅವರ ನಿಧನದಿಂದ ಬಹಳ ನೋವಾಗಿದೆ. ನಮ್ಮ ತಂದೆ-ತಾಯಿ ಜೊತೆ ಅವರಿಗೆ ತುಂಬ ನಂಟು ಇತ್ತು. ತಂದೆಯ ಜೊತೆ ಅನೇಕ ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದರು. ಅವರ ಮನೆ ಕೂಡ ಇಲ್ಲೇ ಹತ್ತಿರದಲ್ಲಿ ಇರುವುದು. ಕಾಲು ನೋವು ಇದ್ದರೂ ಕೂಡ ನಮ್ಮ ಮದುವೆಗೆ ಬಂದಿದ್ದರು. ತಂದೆಯ ಸ್ಥಾನದಲ್ಲಿ ನಿಂತು ಆಶೀರ್ವಾದ ಮಾಡಿದ್ದರು’ ಎಂದು ತರುಣ್ ಸುಧೀರ್​ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More