ದರ್ಶನ್ ನಂಬಿಕೊಂಡು ಹಲವು ಕುಟುಂಬಗಳು ಇವೆ: ತರುಣ್ ಸುಧೀರ್​

Updated on: Dec 13, 2024 | 7:16 PM

ನಟ ದರ್ಶನ್ ಅವರಿಗೆ ಜಾಮೀನು ಸಿಕ್ಕಿದೆ. ಈ ಕುರಿತು ‘ಕಾಟೇರ’ ಸಿನಿಮಾದ ನಿರ್ದೇಶಕ ತರುಣ್ ಸುಧೀರ್​ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ನಮಗೆ ಬಹಳ ಖುಷಿ ಆಗಿದೆ. ಇಂದು ಹನುಮ ಜಯಂತಿ. ಪಾಸಿಟಿವ್ ವೈಬ್ ಇದೆ. ನಂಬಿದವರನ್ನು ಆಂಜನೇಯ ಕೈ ಬಿಡುವುದಿಲ್ಲ. ನ್ಯಾಯಾಲಯಕ್ಕೆ ಧನ್ಯವಾದ ಹೇಳುತ್ತೇನೆ’ ಎಂದು ತರುಣ್ ಸುಧೀರ್​ ಅವರು ಹೇಳಿದ್ದಾರೆ.

‘ಜಾಮೀನು ಸಿಕ್ಕಿರುವುದು ಮಾತ್ರವಲ್ಲ, ಆದಷ್ಟು ಬೇಗ ದರ್ಶನ್ ಅವರು ಆರೋಪಮುಕ್ತರಾಗಿ ಹೊರಗೆ ಬರಲಿ. ಅವರ ಆರೋಗ್ಯದ ಬಗ್ಗೆಯೇ ನಮ್ಮ ಮೊದಲ ಕಾಳಜಿ ಇದೆ. ಯಾಕೆಂದರೆ, ಕನ್ನಡ ಚಿತ್ರರಂಗದಲ್ಲಿ 200, 300 ಕೋಟಿ ರೂಪಾಯಿ ವಹಿವಾಟು ನಡೆಸುವಂತಹ ನಟ ಅವರು. ಅವರನ್ನು ನಂಬಿಕೊಂಡು ಹಲವಾರು ಕುಟುಂಬಗಳು ಇವೆ. ಆದಷ್ಟು ಬೇಗ ಅವರು ಗುಣಮುಣರಾಗಲಿ ಅಂತ ಪ್ರಾರ್ಥಿಸುತ್ತೇವೆ’ ಎಂದು ನಿರ್ದೇಶಕ ತರುಣ್ ಸುಧೀರ್​ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More