ಹಾಸನಾಂಬೆ ದರ್ಶನ ಪಡೆದ ಬಳಿಕ ಡಿ ಬಾಸ್ ಬಗ್ಗೆ ಮಾತಾಡಿದ ಗೆಳೆಯ ತರುಣ್ ಸುಧೀರ್

Updated on: Oct 27, 2024 | 6:10 PM

ನಿರ್ದೇಶಕ ತರುಣ್ ಸುಧೀರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಅವರ ಜೊತೆ ಪತ್ನಿ ಸೋನಲ್ ಮಾಂತೆರೋ ಕೂಡ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ತರುಣ್ ಸುಧೀರ್​ ಅವರು ದರ್ಶನ್​ ಅವರನ್ನು ನೆನಪಿಸಿಕೊಂಡರು. ‘ಈ ಬಾರಿ ದರ್ಶನ್​ ಅವರು ಬಂದಿಲ್ಲ. ಹೊರಗೆ ಇದ್ದಿದ್ದರೆ ಅವರು ಖಂಡಿತವಾಗಿಯೂ ಬರುತ್ತಿದ್ದರು’ ಎಂದು ತರುಣ್ ಸುಧೀರ್ ಹೇಳಿದ್ದಾರೆ.

ಹಾಸನಾಂಬೆ ದರ್ಶನ ಪಡೆದು ನಂತರ ನಿರ್ದೇಶಕ ತರುಣ್ ಸುಧೀರ್ ಹೇಳಿಕೆ ನೀಡಿದ್ದಾರೆ. ‘ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬೇಡಿಕೊಂಡಿದ್ದೇನೆ. ಮದುವೆಯಾಗಿ ಮೊದಲ ಬಾರಿ ಬಂದಿರೋದು ವಿಶೇಷ. ಜೀವನ ಪೂರ್ತಿ ಹೀಗೆ ಖುಷಿಯಾಗಿ ಇರಲಿ ಎಂದು ಕೇಳಿಕೊಳ್ಳುತ್ತೇನೆ. ಪ್ರತಿ ವರ್ಷ ನಾನು ಹಾಸನಾಂಬೆ ದರ್ಶನಕ್ಕೆ ಬರುತ್ತಿದ್ದೆ. ಕಳೆದ ವರ್ಷ ಶೂಟಿಂಗ್ ಇದ್ದಿದ್ದರಿಂದ ಬರಲಾಗಲಿಲ್ಲ. ಕಳೆದ ವರ್ಷ ಸೋನಾಲ್ ಬಂದಿದ್ದರು. ಇಲ್ಲಿಗೆ ಬಂದಾಗ ಒಂದು ಪಾಸಿಟಿವ್ ಎನರ್ಜಿ ಇರುತ್ತದೆ’ ಎಂದು ತರುಣ್ ಸುಧೀರ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More