‘ಆ ದಿನ ನನ್ನ ಆ್ಯಂಕರಿಂಗ್ ಮುಗಿಯುತ್ತೆ’: ದೊಡ್ಡ ಜವಾಬ್ದಾರಿ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್
‘ಸ್ಪರ್ಧಿಗಳ ಹೇಳಿಕೆಯನ್ನು ನಾನು ಬೇರೆ ರೀತಿಯಲ್ಲಿ ಅರ್ಥ ಮಾಡಿಕೊಂಡರೆ ಅವರಿಗೆ ವೋಟ್ಸ್ ಕಡಿಮೆ ಆಗುತ್ತದೆ. ಅವರ ವ್ಯಕ್ತಿತ್ವ ಬಿದ್ದು ಹೋಗುತ್ತದೆ. ಸ್ಪರ್ಧಿಗಳಿಗೆ ನನ್ನ ಮೇಲಿನ ನಂಬಿಕೆ ಹೊರಟು ಹೋಗುತ್ತದೆ. ಅದೃಷ್ಟವಶಾತ್ ಇಂದಿನ ತನಕ ಅದು ಆಗಿಲ್ಲ’ ಎಂದು ಬಿಗ್ ಬಾಸ್ ನಿರೂಪಕ ಸುದೀಪ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ನಟ ಕಿಚ್ಚ ಸುದೀಪ್ (Kichcha Sudeep) ಅವರು ಕಳೆದ 9 ಸೀಸನ್ಗಳಲ್ಲಿ ಬಿಗ್ ಬಾಸ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಈಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ (Bigg Boss Kannada Season 10) ನಿರೂಪಣೆಗೆ ಸಜ್ಜಾಗಿದ್ದಾರೆ. ಅವರಿಗೆ ಈ ನಿರೂಪಣೆಯಲ್ಲಿ ದೊಡ್ಡ ಜವಾಬ್ದಾರಿ ಮತ್ತು ಸವಾಲು ಇದೆ. ಆ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸದೇ ಇದ್ದರೆ ಆ ದಿನ ತಮ್ಮ ಆ್ಯಂಕರಿಂಗ್ ಮುಗಿಯುತ್ತದೆ ಎಂದು ಅವರು ಹೇಳಿದ್ದಾರೆ. ‘ನನ್ನ ಮಾತಿನ ಮೇಲೆ ಹಿಡಿತ ಇಲ್ಲ ಎಂದರೆ… ನಾನು ಕೇಳಿದ ಪ್ರಶ್ನೆಗಳ ಮೇಲೆ ನನಗೆ ನಿಯಂತ್ರಣ ಇಲ್ಲ ಎಂದರೆ.. ಎಡವಟ್ಟಾಗಿ ನಾನು ಬೇರೆ ಪ್ರಶ್ನೆಗಳನ್ನು ಕೇಳಿದರೆ.. ಸ್ಪರ್ಧಿಗಳ ಹೇಳಿಕೆಯನ್ನು ನಾನು ಬೇರೆ ರೀತಿಯಲ್ಲಿ ಅರ್ಥ ಮಾಡಿಕೊಂಡರೆ ಅವರಿಗೆ ವೋಟ್ಸ್ ಕಡಿಮೆ ಆಗುತ್ತದೆ. ಅವರ ವ್ಯಕ್ತಿತ್ವ ಬಿದ್ದು ಹೋಗುತ್ತದೆ. ಸ್ಪರ್ಧಿಗಳಿಗೆ ನನ್ನ ಮೇಲಿನ ನಂಬಿಕೆ ಹೊರಟು ಹೋಗುತ್ತದೆ. ಕ್ಷಮಿಸಿ ಸರ್.. ನಾನು ಹೇಳಿದ್ದು ಹಾಗಲ್ಲ. ನೀವು ಬೇಕಿದ್ದರೆ ಇನ್ನೊಮ್ಮೆ ಚೆಕ್ ಮಾಡಿ ಅಂತ ಸ್ಪರ್ಧಿಗಳು ನನಗೆ ಹೇಳುವಂತಹ ಪರಿಸ್ಥಿತಿ ಬಂದರೆ ಆ ದಿನ ನನ್ನ ಆ್ಯಂಕರಿಂಗ್ ಅಂತ್ಯವಾಗುತ್ತದೆ. ಅದೃಷ್ಟವಶಾತ್ ಇಂದಿನ ತನಕ ಅದು ಆಗಿಲ್ಲ. ಯಾಕೆಂದರೆ ನಾನು ಗಮನ ಕೊಟ್ಟು ಎಲ್ಲವನ್ನೂ ನೋಡುತ್ತೇನೆ. ನನ್ನ ದೃಷ್ಟಿಕೋನ ಮುಖ್ಯವಾಗುತ್ತದೆ. ಪಕ್ಷಪಾತ ಮಾಡುವ ಹಾಗಿಲ್ಲ’ ಎಂದು ಸುದೀಪ್ (Sudeep) ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ

