‘ಆ ದಿನ ನನ್ನ ಆ್ಯಂಕರಿಂಗ್​ ಮುಗಿಯುತ್ತೆ’: ದೊಡ್ಡ ಜವಾಬ್ದಾರಿ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್​

‘ಸ್ಪರ್ಧಿಗಳ ಹೇಳಿಕೆಯನ್ನು ನಾನು ಬೇರೆ ರೀತಿಯಲ್ಲಿ ಅರ್ಥ ಮಾಡಿಕೊಂಡರೆ ಅವರಿಗೆ ವೋಟ್ಸ್​ ಕಡಿಮೆ ಆಗುತ್ತದೆ. ಅವರ ವ್ಯಕ್ತಿತ್ವ ಬಿದ್ದು ಹೋಗುತ್ತದೆ. ಸ್ಪರ್ಧಿಗಳಿಗೆ ನನ್ನ ಮೇಲಿನ ನಂಬಿಕೆ ಹೊರಟು ಹೋಗುತ್ತದೆ. ಅದೃಷ್ಟವಶಾತ್​ ಇಂದಿನ ತನಕ ಅದು ಆಗಿಲ್ಲ’ ಎಂದು ಬಿಗ್​ ಬಾಸ್​ ನಿರೂಪಕ ಸುದೀಪ್​ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

‘ಆ ದಿನ ನನ್ನ ಆ್ಯಂಕರಿಂಗ್​ ಮುಗಿಯುತ್ತೆ’: ದೊಡ್ಡ ಜವಾಬ್ದಾರಿ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್​
|

Updated on: Oct 03, 2023 | 3:39 PM

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಕಳೆದ 9 ಸೀಸನ್​ಗಳಲ್ಲಿ ಬಿಗ್​ ಬಾಸ್​ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದಾರೆ. ಈಗ ಅವರು ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada Season 10) ನಿರೂಪಣೆಗೆ ಸಜ್ಜಾಗಿದ್ದಾರೆ. ಅವರಿಗೆ ಈ ನಿರೂಪಣೆಯಲ್ಲಿ ದೊಡ್ಡ ಜವಾಬ್ದಾರಿ ಮತ್ತು ಸವಾಲು ಇದೆ. ಆ ಜವಾಬ್ದಾರಿಯನ್ನು ಸರಿಯಾಗಿ ನಿಭಾಯಿಸದೇ ಇದ್ದರೆ ಆ ದಿನ ತಮ್ಮ ಆ್ಯಂಕರಿಂಗ್​ ಮುಗಿಯುತ್ತದೆ ಎಂದು ಅವರು ಹೇಳಿದ್ದಾರೆ. ‘ನನ್ನ ಮಾತಿನ ಮೇಲೆ ಹಿಡಿತ ಇಲ್ಲ ಎಂದರೆ… ನಾನು ಕೇಳಿದ ಪ್ರಶ್ನೆಗಳ ಮೇಲೆ ನನಗೆ ನಿಯಂತ್ರಣ ಇಲ್ಲ ಎಂದರೆ.. ಎಡವಟ್ಟಾಗಿ ನಾನು ಬೇರೆ ಪ್ರಶ್ನೆಗಳನ್ನು ಕೇಳಿದರೆ.. ಸ್ಪರ್ಧಿಗಳ ಹೇಳಿಕೆಯನ್ನು ನಾನು ಬೇರೆ ರೀತಿಯಲ್ಲಿ ಅರ್ಥ ಮಾಡಿಕೊಂಡರೆ ಅವರಿಗೆ ವೋಟ್ಸ್​ ಕಡಿಮೆ ಆಗುತ್ತದೆ. ಅವರ ವ್ಯಕ್ತಿತ್ವ ಬಿದ್ದು ಹೋಗುತ್ತದೆ. ಸ್ಪರ್ಧಿಗಳಿಗೆ ನನ್ನ ಮೇಲಿನ ನಂಬಿಕೆ ಹೊರಟು ಹೋಗುತ್ತದೆ. ಕ್ಷಮಿಸಿ ಸರ್.. ನಾನು ಹೇಳಿದ್ದು ಹಾಗಲ್ಲ. ನೀವು ಬೇಕಿದ್ದರೆ ಇನ್ನೊಮ್ಮೆ ಚೆಕ್​ ಮಾಡಿ ಅಂತ ಸ್ಪರ್ಧಿಗಳು ನನಗೆ ಹೇಳುವಂತಹ ಪರಿಸ್ಥಿತಿ ಬಂದರೆ ಆ ದಿನ ನನ್ನ ಆ್ಯಂಕರಿಂಗ್​ ಅಂತ್ಯವಾಗುತ್ತದೆ. ಅದೃಷ್ಟವಶಾತ್​ ಇಂದಿನ ತನಕ ಅದು ಆಗಿಲ್ಲ. ಯಾಕೆಂದರೆ ನಾನು ಗಮನ ಕೊಟ್ಟು ಎಲ್ಲವನ್ನೂ ನೋಡುತ್ತೇನೆ. ನನ್ನ ದೃಷ್ಟಿಕೋನ ಮುಖ್ಯವಾಗುತ್ತದೆ. ಪಕ್ಷಪಾತ ಮಾಡುವ ಹಾಗಿಲ್ಲ’ ಎಂದು ಸುದೀಪ್​ (Sudeep) ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ