Priyank Kharge; ಜನ ಭಾರೀ ಬಹುಮತ ನೀಡಿ ಗೆಲ್ಲಿಸಿದಾಗ ಸಚಿವ ಸ್ಥಾನಗಳಿಗೆ ಸಹಜವಾಗೇ ಪೈಪೋಟಿ ಜಾಸ್ತಿಯಿರುತ್ತದೆ: ಪ್ರಿಯಾಂಕ್ ಖರ್ಗೆ

Updated on: May 20, 2023 | 12:20 PM

ಜನರಿಗೆ ನೀಡಿರುವ 5 ಗ್ಯಾರೆಂಟಿಗಳನ್ನು ಮೊದಲ ಸಂಪುಟ ಸಭೆಯಲ್ಲಿ ಅನುಮೋದಿಸಲಾಗುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಬೆಂಗಳೂರು: ಎರಡನೇ ಬಾರಿಗೆ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಸಚಿವ ಸಂಪುಟಕ್ಕೆ ಶಾಸಕರನ್ನು ಆಯ್ಕೆ ಮಾಡಲು ಪಕ್ಷದ ವರಿಷ್ಠರು ಸಾಕಷ್ಟು ಕಸರತ್ತು ನಡೆಸಬೇಕಾಯಿತೆನ್ನುವ ಸಂಗತಿಯನ್ನು ಅಂಗೀಕರಿಸುತ್ತಾರೆ. ಕಂಠೀರವ ಸ್ಟೇಡಿಯಂ (Kanteerava Stadium) ಬಳಿ ಇಂದು ಟಿವಿ9 ವರದಿಗಾರನೊಂದಿಗೆ ಮಾತಾಡಿದ ಪ್ರಿಯಾಂಕ್, ಜನ ಕಾಂಗ್ರೆಸ್ ಭಾರೀ ಬಹುಮತ (clear mandate) ನೀಡಿರುವುದರಿಂದ ಸಚಿವ ಸ್ಥಾನಗಳಿಗೆ ಸಹಜವಾಗಿಯೇ ಪೈಪೋಟಿ ಜಾಸ್ತಿ ಇರುತ್ತದೆ. ಅದರೆ ವರಿಷ್ಥರು ಎಲ್ಲವನ್ನೂ ಸಮಂಜಸವಾಗಿ ಬಗೆಹರಿಸಿದ್ದಾರೆ. ಜನರಿಗೆ ನೀಡಿರುವ 5 ಗ್ಯಾರೆಂಟಿಗಳನ್ನು ಮೊದಲ ಸಂಪುಟ ಸಭೆಯಲ್ಲಿ ಅನುಮೋದಿಸಲಾಗುದು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More