ಭಾರಿ ಮಳೆ ಗಾಳಿಗೆ ಹೊಸಕೋಟೆ ಟೋಲ್ ಪ್ಲಾಜಾ ಬಳಿ ಮುರಿದು ಬಿದ್ದ ಬೃಹತ್ ಜಾಹೀರಾತು ಫಲಕ

Updated on: May 22, 2026 | 4:45 PM

ಭಾರೀ ಮಳೆಗೆ ಹೊಸಕೋಟೆ ಟೋಲ್ ಸಮೀಪ ಬೃಹತ್ ಜಾಹೀರಾತು ಫಲಕ ಧರೆಗೆ ಬಿದ್ದಿದೆ. ದೊಡ್ಡ ಅಮಾನಿಕೆರೆ ನಾಲದ ರಾಜಕಾಲುವೆ ದಂಡೆ ಮೇಲೆ ಇದ್ದ ಬೃಹತ್ ಜಾಹಿರಾತು ಫಲಕ ಮತ್ತು ಎರಡು ಬೃಹತ್ ಕಂಬಗಳು ಗುರುವಾರ ಸಂಜೆ ಬಿರುಗಾಳಿಯ ರಭಸಕ್ಕೆ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಈಚರ್ ವಾಹನದ ಮೇಲೆ ಬಿದ್ದಿದೆ. ನಾಮಫಲಕ ಬಿದ್ದ ರಭಸಕ್ಕೆ ಕ್ಯಾಂಟರ್ ವಾಹನ ಸಂಪೂರ್ಣ ನುಚ್ಚುನೂರಾಗಿದ್ದು, ಬಾರಿ ಅನಾಹುತ ತಪ್ಪಿದಂತಾಗಿದೆ. ಈ ಘಟನೆಯಿಂದಾಗಿ ಸರ್ವಿಸ್ ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಉಂಟಾಗಿದ್ದು, ಕೊನೆಗೆ ಹೊಸಕೋಟೆ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹವೇ ಪಡಬೇಕಾಯ್ತು.

ಬೆಂಗಳೂರು, (ಮೇ 22): ಭಾರೀ ಮಳೆಗೆ (heavy rain) ಹೊಸಕೋಟೆ (Hoskote) ಟೋಲ್ ಸಮೀಪ ಬೃಹತ್ ಜಾಹೀರಾತು ಫಲಕ ಧರೆಗೆ ಬಿದ್ದಿದೆ. ದೊಡ್ಡ ಅಮಾನಿಕೆರೆ ನಾಲದ ರಾಜಕಾಲುವೆ ದಂಡೆ ಮೇಲೆ ಇದ್ದ ಬೃಹತ್ ಜಾಹಿರಾತು ಫಲಕ ಮತ್ತು ಎರಡು ಬೃಹತ್ ಕಂಬಗಳು ಗುರುವಾರ ಸಂಜೆ ಬಿರುಗಾಳಿಯ ರಭಸಕ್ಕೆ ಹೆದ್ದಾರಿ ಸರ್ವಿಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಈಚರ್ ವಾಹನದ ಮೇಲೆ ಬಿದ್ದಿದೆ. ನಾಮಫಲಕ ಬಿದ್ದ ರಭಸಕ್ಕೆ ಕ್ಯಾಂಟರ್ ವಾಹನ ಸಂಪೂರ್ಣ ನುಚ್ಚುನೂರಾಗಿದ್ದು, ಬಾರಿ ಅನಾಹುತ ತಪ್ಪಿದಂತಾಗಿದೆ. ಈ ಘಟನೆಯಿಂದಾಗಿ ಸರ್ವಿಸ್ ರಸ್ತೆಯಲ್ಲಿ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಉಂಟಾಗಿದ್ದು, ಕೊನೆಗೆ ಹೊಸಕೋಟೆ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಟ್ರಾಫಿಕ್ ಕ್ಲಿಯರ್ ಮಾಡಲು ಹರಸಾಹವೇ ಪಡಬೇಕಾಯ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: May 22, 2026 03:55 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More