ಗಲಭೆಕೋರ ಬಂಧಿತ ಸೈಮುದ್ದೀನ್​ಗೆ ವಿದೇಶಗಳಿಂದ ಹರಿದು ಬರ್ತಿತ್ತು ಕೋಟ್ಯಾಂತರ ಹಣ!?

[lazy-load-videos-and-sticky-control id=”YyurfxiRttg”] ಬೆಂಗಳೂರು:ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೂರಾರು ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಪ್ರಮುಖ ಆರೋಪಿ ಎನ್ನಲಾದ ಸಯ್ಯದ್ ಸಮೀಮುದ್ದೀನ್​ನನ್ನು ಸಿಸಿಬಿ ಅಧಿಕಾರಿಗಳು ತೀವ್ರ ತನಿಖೆಗೆ ಒಳಪಡಿಸಿದ್ದಾರೆ. ಮಡಿಕೇರಿ ಮೂಲದವನಾದ ಬಂಧಿತ ಆರೋಪಿ ಸಯ್ಯದ್ ಸಮೀಮುದ್ದೀನ್ ಬೆಂಗಳೂರಿನಲ್ಲಿ ದೊಡ್ಡ ನೆಟ್ವರ್ಕ್ ಹೊಂದಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಿಂದ ತೀವ್ರ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಭಯಾನಕ ಸತ್ಯ ತಿಳಿದುಬರುತ್ತಿದೆ. ಬೆಂಗಳೂರಿನಲ್ಲಿ ತನ್ನ ಹೆಂಡತಿ ಸಮ್ರೂಮ್ ಹೆಸರಲ್ಲಿ NGO ಸಂಸ್ಥೆ ನಡೆಸುತ್ತಿರುವ ಸಯ್ಯದ್ […]

ಗಲಭೆಕೋರ ಬಂಧಿತ ಸೈಮುದ್ದೀನ್​ಗೆ ವಿದೇಶಗಳಿಂದ ಹರಿದು ಬರ್ತಿತ್ತು ಕೋಟ್ಯಾಂತರ ಹಣ!?
CCB ಕಚೇರಿ
ಸಾಧು ಶ್ರೀನಾಥ್​

Updated on: Aug 19, 2020 | 4:01 PM

[lazy-load-videos-and-sticky-control id=”YyurfxiRttg”]

ಬೆಂಗಳೂರು:ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನೂರಾರು ಗಲಭೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಪ್ರಮುಖ ಆರೋಪಿ ಎನ್ನಲಾದ ಸಯ್ಯದ್ ಸಮೀಮುದ್ದೀನ್​ನನ್ನು ಸಿಸಿಬಿ ಅಧಿಕಾರಿಗಳು ತೀವ್ರ ತನಿಖೆಗೆ ಒಳಪಡಿಸಿದ್ದಾರೆ.

ಮಡಿಕೇರಿ ಮೂಲದವನಾದ ಬಂಧಿತ ಆರೋಪಿ ಸಯ್ಯದ್ ಸಮೀಮುದ್ದೀನ್ ಬೆಂಗಳೂರಿನಲ್ಲಿ ದೊಡ್ಡ ನೆಟ್ವರ್ಕ್ ಹೊಂದಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಿಂದ ತೀವ್ರ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರಿಗೆ ಭಯಾನಕ ಸತ್ಯ ತಿಳಿದುಬರುತ್ತಿದೆ.

ಬೆಂಗಳೂರಿನಲ್ಲಿ ತನ್ನ ಹೆಂಡತಿ ಸಮ್ರೂಮ್ ಹೆಸರಲ್ಲಿ NGO ಸಂಸ್ಥೆ ನಡೆಸುತ್ತಿರುವ ಸಯ್ಯದ್ ಸಮೀಮುದ್ದೀನ್, RSS ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದ ಆರೋಪಿಗಳೊಂದಿಗೆ ನಿತ್ಯ ಸಂಪರ್ಕದಲ್ಲಿದ್ದ ಎನ್ನಲಾಗಿದೆ. NGO ಸಂಸ್ಥೆ ಹೊಂದಿರುವ ಸಯ್ಯದ್ ಸಮೀಮುದ್ದೀನ್​ಗೆ ವಿದೇಶಗಳಿಂದ ಕೋಟ್ಯಂತರ ರೂಪಾಯಿ ಅನುದಾನ ಹಣ ಹರಿದು ಬಂದಿರುವುದು ಬೆಳಕಿಗೆ ಬಂದಿದೆ.

ಈ ಹಣದ ಮೂಲವನ್ನು ಸಿಸಿಬಿ ಪೊಲೀಸರು ಹುಡುಕುತ್ತಿದ್ದಾರೆ. ಉಗ್ರ ಸಂಘಟನೆಯ ಮುಖಂಡರೊಂದಿಗೆ ಆರೋಪಿ ಸಯ್ಯದ್ ಸಮೀಮುದ್ದೀನ್​ಗೆ ಲಿಂಕ್ ಇದೆ ಎನ್ನಲಾಗಿದ್ದು, ಡಿ.ಜೆ ಹಳ್ಳಿ ಹಾಗೂ ಕೆ.ಜಿಹಳ್ಳಿ ಹಿಂಸಾಚಾರಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಸಯ್ಯದ್ ಸಮೀಮುದ್ದೀನ್ ಮಾಡಿದ್ದನಾ? ಎಂಬುದರ ಬಗ್ಗೆ ಸಿಸಿಬಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

Published On - 11:51 am, Wed, 19 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us