ಕೊಡಗು ಜಿಲ್ಲೆಯಾದ್ಯಂತ ಅಬ್ಬರದ ಮಳೆ; ಅನಾರೋಗ್ಯ ಪೀಡಿತನನ್ನು ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಪ್ರವಾಹ ದಾಟಿದ ಸ್ಥಳೀಯರು
ಮಡಿಕೇರಿ ತಾಲೂಕಿನ ಬೇಂಗೂರಿನಲ್ಲಿ ಕಾವೇರಿ ಉಕ್ಕಿ ಹರಿಯುತ್ತಿದ್ದಾಳೆ. ಈ ಹಿನ್ನಲೆ ದೋಣಿಕಡವು-ಕೂಡಕಂಡಿ ಪರಂಬು ಸಂಪರ್ಕ ಬೆಸೆಯುವ ಸೇತುವೆ ಜಲಾವೃತವಾಗಿದ್ದು, ಅನಾರೋಗ್ಯ ಪೀಡಿತನನ್ನು ಸ್ಥಳೀಯರು ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಪ್ರವಾಹ ದಾಟಿಸಿದ್ದಾರೆ.
ಕೊಡಗು: ಕರಾವಳಿ ಜಿಲ್ಲೆಗಳು ಸೇರಿದಂತೆ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಂತೆ ಮಡಿಕೇರಿ(Madikeri) ತಾಲೂಕಿನ ಬೇಂಗೂರಿನಲ್ಲಿ ಕಾವೇರಿ ಉಕ್ಕಿ ಹರಿಯುತ್ತಿದ್ದಾಳೆ. ಈ ಹಿನ್ನಲೆ ದೋಣಿಕಡವು-ಕೂಡಕಂಡಿ ಪರಂಬು ಸಂಪರ್ಕ ಬೆಸೆಯುವ ಸೇತುವೆ ಜಲಾವೃತವಾಗಿದೆ. ರಸ್ತೆ ಸಂಪರ್ಕ ಕಡಿತ ಹಿನ್ನೆಲೆ ನಾಲ್ಕು ದಿನಗಳಿಂದ ವಿದ್ಯಾರ್ಥಿಗಳು ಶಾಲೆಗೆ ಹೋಗಿಲ್ಲ. ಇನ್ನು ಅನಾರೋಗ್ಯ ಪೀಡಿತನನ್ನು ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಸ್ಥಳೀಯರು ಪ್ರವಾಹ ದಾಟಿದ ಘಟನೆ ನಡೆದಿದೆ. ಕೆಪಿ ರಕ್ಷಿತ್ ಎಂಬಾತ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಹೋಗಬೇಕಾಗಿತ್ತು. ಆದರೆ, ಸೇತುವೆ ಮುಳುಗಡೆಯಾದ ಕಾರಣ ಹೋಗಲಾಗಿರಲಿಲ್ಲ. ಇದೀಗ ಸ್ಥಳೀಯರೇ ಸೇರಿ ಸ್ಟ್ರೆಚರ್ನಲ್ಲಿ ಎತ್ತಿಕೊಂಡು ಹೋಗಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
