Assembly Polls: ಕಾಂಗ್ರೆಸ್ ಬಸ್ ಕನ್ಯಾಕುಮಾರಿಯಿಂದ ಹೊರಟು ಕಾಶ್ಮೀರದಲ್ಲಿ ನಿಂತುಹೋಗಿದೆ: ಹೆಚ್ ಡಿ ರೇವಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Feb 02, 2023 | 1:43 PM

ಕಾಂಗ್ರೆಸ್ ಎಂಥ ಪಕ್ಷ ಅಂತ ಜನರಿಗೆ ಗೊತ್ತಾಗಿದೆ, ಪಕ್ಷದ ಬಸ್ ಕನ್ಯಾಕುಮಾರಿಯಿಂದ ಹೊರಟು ಕಾಶ್ಮೀರದಲ್ಲಿ ನಿಂತುಹೋಗಿದೆ ಎಂದು ರೇವಣ್ಣ ಹೇಳಿದರು.

ಹಾಸನ: ಜೆಡಿಎಸ್ ಮುಖಂಡ ಹೆಚ್ ಡಿ ರೇವಣ್ಣ (HD Revanna) ಇಂದು ಹಾಸನದಲ್ಲಿ ಕಾಂಗ್ರೆಸ್ ಪಕ್ಷವನ್ನು ನಿರ್ನಾಮಗೊಂಡಿರುವ ಪಕ್ಷ ಅಂತ ಲೇವಡಿ ಮಾಡಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತಾಡಿದ ರೇವಣ್ಣನವರು, ಕಾಂಗ್ರೆಸ್ ನಾಯಕರು ಜೆಡಿಎಸ್ ಪಕ್ಷವನ್ನು ಎ ಟೀಮ್ ಬಿ ಟೀಮ್ ಅಂತ ಕರೆಯುತ್ತಾರೆ. ಆದರೆ ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಹೆಚ್ ಡಿ ದೇವೇಗೌಡರು (HD Devegowda) ಸೋಲೋದಕ್ಕೆ ಕಾಂಗ್ರೆಸ್ ಕಾರಣ. ಹಾಸನದಲ್ಲಿ ಮುಸ್ಲಿಂ ಮತದಾರರು ವೋಟ್ ನೀಡದೆ ಹೋಗಿದ್ದಕ್ಕೆ ಬಿಜೆಪಿ ಅಭ್ಯರ್ಥಿ ವಿಧಾನ ಸಭೆಗೆ ಆಯ್ಕೆಯಾದರು. ಕಾಂಗ್ರೆಸ್ ಎಂಥ ಪಕ್ಷ ಅಂತ ಜನರಿಗೆ ಗೊತ್ತಾಗಿದೆ, ಪಕ್ಷದ ಬಸ್ ಕನ್ಯಾಕುಮಾರಿಯಿಂದ ಹೊರಟು ಕಾಶ್ಮೀರದಲ್ಲಿ ನಿಂತುಹೋಗಿದೆ ಎಂದು ರೇವಣ್ಣ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.