ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್

ಲೂಟಿ ಹೋಡೆಯೋಕೆ ಸರ್ಕಾರ ಸಿದ್ಧತೆ ಮಾಡ್ತಿದೆ -ಆರ್.ಅಶೋಕ್
| Updated By: ಆಯೇಷಾ ಬಾನು

Updated on:Jul 03, 2024 | 1:30 PM

ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಲೂಟಿ ಹೊಡೆಯೋಕೆ ಸರ್ಕಾರ ಸಿದ್ದತೆ ಮಾಡ್ತಿದೆ. ಒಂದಾದ ಮೇಲೊಂದು ಹಗರಣ ನಡೀತಿದೆ. ತೆಲಂಗಾಣ ಹಾಗೂ ಹೈದ್ರಾಬಾದ್ ಲೂಟಿ ಹಣ ಹೋಗಿದೆ ಎಂದಿದ್ದಾರೆ.

ಬೆಂಗಳೂರು, ಜುಲೈ.03: ಲೂಟಿ ಹೋಡೆಯೋಕೆ ಸರ್ಕಾರ (Congress Government) ಸಿದ್ಧತೆ ಮಾಡ್ತಿದೆ ಎಂದು ಬೆಂಗಳೂರಿನಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ್ (R.Ashok) ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಬಂದು ಒಂದು ವರ್ಷ ಆಗಿದೆ. ಲೂಟಿ ಹೊಡೆಯೋಕೆ ಸರ್ಕಾರ ಸಿದ್ದತೆ ಮಾಡ್ತಿದೆ. ಒಂದಾದ ಮೇಲೊಂದು ಹಗರಣ ನಡೀತಿದೆ. ತೆಲಂಗಾಣ ಹಾಗೂ ಹೈದ್ರಾಬಾದ್ ಲೂಟಿ ಹಣ ಹೋಗಿದೆ. ನಾವು ಹೋರಾಟ ಮಾಡಿದ್ದಕ್ಕೆ ಸಚಿವರು ರಾಜೀನಾಮೆ ಕೊಟ್ಟಿದ್ರು. ರಾಜ ಭವನಕ್ಕೆ ಹೋದ್ಮೇಲೆ ಸಚಿವರು ರಾಜೀನಾಮೆ ನೀಡಿದ್ರು. ನಮ್ಮ ಹೋರಾಟವನ್ನ ಹತ್ತಿಕುತ್ತಿದ್ದಾರೆ ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ.

ಪ್ರಜಾಪ್ರಭುತ್ವದ‌‌ ಕಗ್ಗೊಲೆ ‌ಮಾಡುತ್ತಿದ್ದಾರೆ. ಕೆಫೆ ಬ್ಲಾಸ್ಟ್ ಮಾಡುವರನ್ನ ಹಿಡಿಯೋಕೆ ಪೊಲೀಸರನ್ನ ಬಿಟ್ಟಿಲ್ಲ. ಆದರೆ ನಮ್ಮನ್ನ ಹಿಡಿಯೋದಕ್ಕೆ ನೂರಾರು ಪೊಲೀಸರನ್ನ ಬಿಟ್ಟಿದ್ದಾರೆ. ಇದರ ವಿರುದ್ಧ ಹೋರಾಟ ಮಾಡುತ್ತೇವೆ. ವಾಲ್ಮೀಕಿ ಬೆನ್ನಲ್ಲೇ ಮುಡಾದಲ್ಲೂ ಹಗರಣ ನಡೆದಿದೆ. ಬದಲಿ ನಿವೇಶನದ ಗೋಲ್ಮಾಲ್ ಆಗಿದೆ. ಕಟಾ ಕಟಾ ಅಂತ ಹಗರಣ ನಡೆದಿದೆ. 80 ಸಾವಿರ ಜನ ಅರ್ಜಿ ಹಾಕಿದವರಿಗೆ ಸೈಟ್ ಇಲ್ಲ. ಬಡವರಿಗೆ ಹಂಚಿಕೆಯಾಗಿರೋ ಸೈಟ್ ದೋಚಿದ್ದಾರೆ. ದೀಪದ ಕೆಳಗೆ ಲೂಟಿ ಮಾಡುತ್ತಿದ್ದಾರೆ. ಸುರ್ಜೇವಾಲ ಬೆಂಗಳೂರಿಗೆ ಬಂದು ಹೋಗಿದ್ರು. ಇಲ್ಲಿನ‌ ಲೂಟಿ ಮಾಡೆಲ್ ದೇಶಕ್ಕೆ ಹಂಚುತ್ತಿದ್ದಾರೆ. ಯಾರ್ಯಾರಿಗೆ ಸೈಟ್ ಅಲಾಟ್ ಆಗಿದೆ, ಅದನ್ನ ರದ್ದು ಮಾಡಬೇಕು. ವಿಧಾನಸಭೆ ಹಾಗೂ ಪರಿಷತ್ ನಲ್ಲೂ ನಾಮ್ಮ ಹೋರಾಟ ಮಾಡುತ್ತೇವೆ. ಸರ್ಕಾರದ ಭ್ರಷ್ಟಾಚಾರ‌ ಜನರ ಮುಂದೆ ಇಡುತ್ತೇವೆ ಎಂದರು.

ಇದನ್ನೂ ಓದಿ: ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಕಲೇಶಪುರ ಬೈಪಾಸ್​ನಲ್ಲಿ ಹಲವೆಡೆ ಭೂ ಕುಸಿತ: ಸಂಚಾರಕ್ಕೆ ಅಡ್ಡಿ

Published On - 1:26 pm, Wed, 3 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ