ಟೀಕಿಸುವ ಭರದಲ್ಲಿ ರಾಜ್ಯಪಾಲರ ವಿರುದ್ಧ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಶಾಸಕ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 18, 2024 | 2:49 PM

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಕೈ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇಂದು(ಭಾನುವಾರ) ಮಳವಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ(PM Narendraswamy) ನಾಲಿಗೆ ಹರಿಬಿಟ್ಟಿದ್ದಾರೆ.

ಮಂಡ್ಯ, ಆ.18: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಕೈ ಪಾಳಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇಂದು(ಭಾನುವಾರ) ಮಳವಳ್ಳಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ವೇಳೆ ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ಶಾಸಕ ಪಿಎಂ ನರೇಂದ್ರಸ್ವಾಮಿ(PM Narendraswamy) ನಾಲಿಗೆ ಹರಿಬಿಟ್ಟಿದ್ದಾರೆ. ವಾಗ್ದಾಳಿ ಬರದಲ್ಲಿ ಅಸಬಂದ್ದ ಪದ ಬಳಸಿದ್ದು, ‘ಸುಪ್ರೀಂ ಕೋರ್ಟ್​ನಿಂದ ಛೀಮಾರಿ ಹಾಕಿಸಿಕೊಂಡ ಅಯೋಗ್ಯ, ಮುಟ್ಟಾಳನ ಅರ್ಜಿ ಕೊಡ್ತಾನೆ. ಅವನ ಅರ್ಜಿ ಇಟ್ಕೊಂಡು ನೋಟೀಸ್ ಕೊಡ್ತೀರಲ್ಲಪ್ಪ. ರಾಜ್ಯಪಾಲ ಆಗೋಕೆ ನೀನು ನಾಲಾಯಕ್ ಎಂದಿದ್ದಾರೆ.

ಕುಮಾರಸ್ವಾಮಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಸೋಕೆ ಲೋಕಾಯುಕ್ತ ಕೇಳಿದ್ದಾರೆ. ಆದ್ರೆ, 8 ತಿಂಗಳಿಂದ ಹಾಗೇ ಕುಳಿತಿದ್ದಿಯಲ್ಲಪ್ಪ. ಮಹಾನ್ ಇಂಡಸ್ಟ್ರಿಯಲಿಸ್ಟ್ ನಿರಾಣೆದು 108 ಹಗರಣವಿದೆ. ಶಶಿಕಲಾ ಜೊಲ್ಲೆ ವಿಚಾರದಲ್ಲಿ ಜೊಲ್ಲು ಸುರಿಸಿಕೊಂಡು ಕುಳ್ತಿದ್ದೀಯಲ್ಲಪ್ಪ. ಘನವೆತ್ತ ರಾಜ್ಯಪಾಲ ನಿನಗೆ ತಾಕತ್ತಿದ್ದರೇ ಅವರ ಮೇಲೆ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡು. ನಮ್ಮ ಸಿದ್ದರಾಮಯ್ಯ ತಪ್ಪು ಮಾಡಿದ್ರೆ ಅವರ ಜೊತೆ ನಮಗೂ ಶಿಕ್ಷೆಕೊಡು. ಕಾಂಗ್ರೆಸ್ಸಿಗರು ರಾಜ್ಯದಲ್ಲಿ ಹೇಡಿಗಳಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us on