ಸರ್ಕಾರ ಕಸದ ಟೆಂಡರ್ ಕೊಟ್ಟು ಕೋಟಿ ಕೋಟಿ ಲೂಟಿ ಮಾಡಲು ಹೊರಟಿದೆ -ಹೆಚ್​ಡಿ ಕುಮಾರಸ್ವಾಮಿ

ಕಸದ್ದು ಟೆಂಡರ್ ಕೊಟ್ಟು ಕೋಟಿ ಲೂಟಿ ಮಾಡಲು ಹೊರಟಿದ್ದಾರೆ. ಖಾಸಗಿ ಕಂಪನಿಯಿಂದ ಸಾವಿರಾರು ಕೋಟಿ ಲೂಟಿ ಮಾಡಲು ಯತ್ನ ನಡೆದಿದೆ ಎಂದು ಬೆಂಗಳೂರಿನಲ್ಲಿ ಹೆಚ್​ಡಿ ಕುಮಾರಸ್ವಾಮಿಯವರು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕಪ್ಪು ಪಟ್ಟಿಯಲ್ಲಿರುವ ಕಂಪನಿಗೆ ಕಸ ಎತ್ತಲು ಗುತ್ತಿಗೆ ಕೊಡುತ್ತಿದ್ದಾರೆ ಎಂದು ತಿಳಿಸಿದರು.

ಸರ್ಕಾರ ಕಸದ ಟೆಂಡರ್ ಕೊಟ್ಟು ಕೋಟಿ ಕೋಟಿ ಲೂಟಿ ಮಾಡಲು ಹೊರಟಿದೆ -ಹೆಚ್​ಡಿ ಕುಮಾರಸ್ವಾಮಿ
| Updated By: ಆಯೇಷಾ ಬಾನು

Updated on: Jul 13, 2024 | 2:58 PM

ಬೆಂಗಳೂರು, ಜುಲೈ.13: ನಗರದ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್​ಡಿ ಕುಮಾರಸ್ವಾಮಿಯವರು (HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ. ಕಸ ಎತ್ತಲು ಎಷ್ಟು ಪರ್ಸೆಂಟೇಜ್ ಹೊಡೆಯುತ್ತಿದ್ದಾರೆ ಗೊತ್ತಾ? ಖಾಸಗಿ ಕಂಪನಿ ಮೂಲಕ 45 ಸಾವಿರ ಕೋಟಿ ಹೊಡೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

ಕಪ್ಪು ಪಟ್ಟಿಯಲ್ಲಿರುವ ಕಂಪನಿಗೆ ಕಸ ಎತ್ತಲು ಗುತ್ತಿಗೆ ಕೊಡುತ್ತಿದ್ದಾರೆ. 30 ವರ್ಷಕ್ಕೆ ಗುತ್ತಿಗೆ ಕೊಡುವುದಕ್ಕೆ ಪ್ಲ್ಯಾನ್​ ಮಾಡುತ್ತಿದ್ದಾರೆ. ಈ ಮೂಲಕ 10-15 ಕೋಟಿ ಲೂಟಿ ಹೊಡೆಯುವ ಪ್ಲ್ಯಾನ್ ಇದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇನ್ನು ಇದೇ ವೇಳೆ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂಬ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿ H.D.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಇವರು ಬೆಂಗಳೂರು ದಕ್ಷಿಣ ಅಂತೆ ನಾವು ಹಾಸನದವರಂತೆ. ನಾನು ಸತ್ತರೆ ಮಣ್ಣಿಗೆ ಹೋಗೋದು ರಾಮನಗರದಲ್ಲಿ. ನೈಸ್​ ಅವ್ಯವಹಾರದ್ದು 1-2 ಅಂದ್ರೆ ದಾಖಲೆ ಬಿಡುಗಡೆ ಮಾಡಬಹುದು. ಕಣ್ಣುಮುಂದೆ ಇರುವ ದಾಖಲೆಗಳ ತನಿಖೆ ಮಾಡುವುದಕ್ಕೆ ಆಗಲ್ಲ. ಕಸದ್ದು ಟೆಂಡರ್ ಕೊಟ್ಟು ಕೋಟಿ ಲೂಟಿ ಮಾಡಲು ಹೊರಟಿದ್ದಾರೆ. ಖಾಸಗಿ ಕಂಪನಿಯಿಂದ ಸಾವಿರಾರು ಕೋಟಿ ಲೂಟಿ ಮಾಡಲು ಯತ್ನ ನಡೆದಿದೆ ಎಂದು ಆಕ್ರೋಶ ಹೊರ ಹಾಕಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ