ಪ್ರಾಸಿಕ್ಯೂಷನ್ ಅನುಮತಿಯನ್ನು ಹಿಂಪಡೆದರೆ ರಾಜ್ಯಪಾಲರು ಮುಖಭಂಗದಿಂದ ತಪ್ಪಿಸಿಕೊಳ್ಳಬಹುದು: ಶಿವಕುಮಾರ್

ನಾವೆಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆಗಿದ್ದೇವೆ ಎಂದು ಶಿವಕುಮಾರ್ ಹೇಳುತ್ತಿದ್ದರೆ ಸಿದ್ದರಾಮಯ್ಯ ಅಭಿಮಾನದಿಂದ ತಮ್ಮ ಡೆಪ್ಯೂಟಿಯ ಮುಖ ನೋಡುತ್ತಿದ್ದರು. ಅವರಿಬ್ಬರ ನಡುವಿನ ಕೆಮಿಸ್ಟ್ರಿ ಈಗ ಬದಲಾಗಿದೆ, ಶಿವಕುಮಾರ್ ತಮ್ಮ ಪ್ರತಿ ಹೇಳಿಕೆಯಲ್ಲಿ ಮುಖ್ಯಮಂತ್ರಿಯವರನ್ನು ವಹಿಸಿಕೊಂಡು ಮಾತಾಡುತ್ತಿದ್ದಾರೆ.

ಪ್ರಾಸಿಕ್ಯೂಷನ್ ಅನುಮತಿಯನ್ನು ಹಿಂಪಡೆದರೆ ರಾಜ್ಯಪಾಲರು ಮುಖಭಂಗದಿಂದ ತಪ್ಪಿಸಿಕೊಳ್ಳಬಹುದು: ಶಿವಕುಮಾರ್
|

Updated on: Aug 22, 2024 | 8:11 PM

ಬೆಂಗಳೂರು: ವಿಧಾನಸೌಧದಲ್ಲಿ ಸಿಎಲ್ ಪಿ ಮೀಟಿಂಗ್ ಮುಗಿದ ಬಳಿಕ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಜಂಟಿ ಸುದ್ದಿಗೋಷ್ಠಿ ನಡೆಸಿದರಾದರೂ ಹಲವಾರು ಸಚಿವರು, ಹಿರಿಯ ಶಾಸಕರು ಅದರಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ನಡೆದ ಚರ್ಚೆಯ ಬಗ್ಗೆ ವಿವರಣೆ ನೀಡಿದ ಶಿವಕುಮಾರ್ ಘನವೆತ್ತ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ನೀಡಿರುವ ಪ್ರಾಸಿಕ್ಯೂಷನ್ ಅನುಮತಿಯನ್ನು ವಿರೋಧಿಸಿ ಸರ್ಕಾರ ಬೀದಿಗಳಲ್ಲಿ ಹೋರಾಟ ನಡೆಸುತ್ತಿದೆ ಮತ್ತು ಕಾನೂನಾತ್ಮಕ ಹೋರಾಟವನ್ನೂ ಕೈಗೊಂಡಿದೆ. ಪಕ್ಷದ ಹಿರಿಯ ಶಾಸಕರಾಗಿರುವ ಆರ್ ವಿ ದೇಶಪಾಂಡೆ ಅವರು ರಾಜ್ಯಪಾಲರ ಕ್ರಮವನ್ನು ಖಂಡಿಸಿ ಪ್ರಸ್ತಾವನೆಯೊಂದನ್ನು ಸಭೆಯಲ್ಲಿ ಮಂಡಿಸಿದಾಗ ಮತ್ತೊಬ್ಬ ಹಿರಿಯ ಶಾಸಕ ತನ್ವೀರ್ ಸೇಠ್ ಅದನ್ನು ಅನುಮೋದಿಸಿದರು ಎಂದು ಶಿವಕುಮಾರ್ ಹೇಳಿದರು. ರಾಜ್ಯಪಾಲರಿಗೆ ಈಗಲೂ ಮನವಿ ಮಾಡಿಕೊಳ್ಳುತ್ತಿದ್ದೇವೆ, ಅವರು ಪ್ರಾಸಿಕ್ಯೂಷನ್​ಗೆ ನೀಡಿರುವ ಅನುಮತಿಯನ್ನು ವಾಪಸ್ಸು ತೆಗೆದುಕೊಂಡರೆ ಮುಖಭಂಗವಾಗೋದು ತಪ್ಪುತ್ತದೆ ಮತ್ತು ಸಂವಿಧಾನಕ್ಕೂ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಶಿವಕುಮಾರ್ ಹೇಳಿದರು

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಡಿಎ ಪ್ರಕರಣ: ವಿಚಾರಣೆಗೆ ಲೋಕಾಯುಕ್ತ ಅಧಿಕಾರಿಗಳ ಎದುರು ಹಾಜರಾದ ಡಿಕೆ ಶಿವಕುಮಾರ್

Follow us
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ