AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರು ಸಂವಿಧಾನದ ಬದಲು ಬಿಜೆಪಿಗೆ ನಿಷ್ಠೆ ತೋರುತ್ತಿದ್ದಾರೆ: ಕೃಷ್ಣ ಭೈರೇಗೌಡ, ಸಚಿವ

ರಾಜ್ಯಪಾಲರು ಸಂವಿಧಾನದ ಬದಲು ಬಿಜೆಪಿಗೆ ನಿಷ್ಠೆ ತೋರುತ್ತಿದ್ದಾರೆ: ಕೃಷ್ಣ ಭೈರೇಗೌಡ, ಸಚಿವ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 31, 2024 | 1:12 PM

Share

ಕಾಂಗ್ರೆಸ್ ನಾಯಕರು ಪ್ರಜಾಪ್ರಭುತ್ವದ ಉಳಿವಿಗಾಗಿ ಹೋರಾಟ ಮಾಡುತ್ತಿದ್ದಾರೆ, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಭರ್ಜರಿ ಜನಮತದೊಂದಿಗೆ ಚುನಾಯಿತ ಸರ್ಕಾರವನ್ನು ಬುಡಮೇಲು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ, ರಾಜ್ಯಪಾಲರು ಅವರೊಂದಿಗೆ ಸೇರಿರುವುದು ದುರಂತ ಎಂದು ಕೃಷ್ಣ ಭೈರೇಗೌಡ ಹೇಳಿದರು.

ಬೆಂಗಳೂರು: ಕಾಂಗ್ರೆಸ್ ನಾಯಕರು ರಾಜ್ಯಪಾಲರ ಕ್ರಮದ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಯ ಸಮಯದಲ್ಲಿ ನಮ್ಮ ಪ್ರತಿನಿಧಿಯೊಂದಿಗೆ ಮಾತಾಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ರಾಜ್ಯಪಾಲರು ಸಂವಿಧಾನಕ್ಕೆ ನಿಷ್ಠೆರಾಗಿರುವ ಬದಲು ಬಿಜೆಪಿಗೆ ತಮ್ಮ ನಿಷ್ಠೆಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದರು. ದಾರಿಹೋಕನೊಬ್ಬ ನೀಡುವ ದೂರಿನ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಾರೆ ಅದರೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ನೀಡಿದ ವರದಿಯನ್ನು ಕಸದ ಬುಟ್ಟಿಗೆ ಎಸೆಯುತ್ತಾರೆ ಎಂದು ಭೈರೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರಾಜ್ಯಪಾಲರಿಗೆ ನಿಂದನೆ ಆರೋಪ: ಜಮೀರ್, ಕೃಷ್ಣ ಭೈರೇಗೌಡ ಸೇರಿ ಕಾಂಗ್ರೆಸ್​ ನಾಯಕರ ವಿರುದ್ದ ಬಿಜೆಪಿ ದೂರು

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.