Who would be CM? ಮುಖ್ಯಮಂತ್ರಿ ಯಾರೆನ್ನುವ ಗೊಂದಲ ಹೈಕಮಾಂಡ್ ಸುಲಭವಾಗಿ ಬಗೆಹರಿಸಲಿದೆ: ಜಿ ಪರಮೇಶ್ವರ್
ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡುತ್ತಾರೆ, ಎಷ್ಟು ಜನ ಉಪಮುಖ್ಯಮಂತ್ರಿಗಳನ್ನು ಮಾಡುತ್ತಾರೆ ಅಂತ ಗೊತ್ತಿಲ್ಲ ಎಂದು ಪರಮೇಶ್ವರ್ ಹೇಳಿದರು.
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ನಡುವೆ ಪೈಪೋಟಿ ಇರೋದು ನಿಜ ಅದರೆ ಅತಿರೇಕಕ್ಕೆ ಹೋಗಲಾರದು; ಯಾಕೆಂದರೆ, ಕಠಿಣ ಪರಿಶ್ರಮದ ನಂತರ ರಾಜ್ಯದಲ್ಲಿ ಜನಾದೇಶ ಕಾಂಗ್ರೆಸ್ ಗೆ ಸಿಕ್ಕಿದೆ. ಹೈಕಮಾಂಡ್ ಗೆ ಈ ಸಂಗತಿಯ ಅರಿವಿದೆ. ಹಾಗಾಗಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾರ್ಯದರ್ಶಿಗಳು ಯಾವುದೇ ಸಮಸ್ಯೆ ಇಲ್ಲದೆ ಈ ಗೊಂದಲ ಬಗೆಹರಿಸುತ್ತಾರೆ ಎಂದು ಕೊರಟಗೆರೆಯಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಡಾ ಜಿ ಪರಮೇಶ್ವರ (Dr G Parameshwar) ಹೇಳಿದರು. ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಪರಮೇಶ್ವರ, ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರಲ್ಲಿ ಯಾರನ್ನು ಮುಖ್ಯಮಂತ್ರಿ ಮಾಡುತ್ತಾರೆ, ಎಷ್ಟು ಜನ ಉಪಮುಖ್ಯಮಂತ್ರಿಗಳನ್ನು ಮಾಡುತ್ತಾರೆ ಅಂತ ತನಗೆ ಗೊತ್ತಿಲ್ಲ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
Loading...
Unable to load recommendations.
Follow Us