AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!

The Hundred, Manchester Originals vs Southern Brave: ಈ ಪಂದ್ಯದಲ್ಲಿ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು ಸೋಲನುಭವಿಸಿದೆ. ಮ್ಯಾಂಚೆಸ್ಟರ್ ಒರಿಜಿನಲ್ಸ್ ನೀಡಿದ 131 ರನ್​ಗಳ ಟಾರ್ಗೆಟ್​ ಬೆನ್ನತ್ತಿದ ಸದರ್ನ್ ಬ್ರೇವ್ ತಂಡವು 99 ಎಸೆತಗಳಲ್ಲಿ ಗುರಿ ಮುಟ್ಟುವ ಮೂಲಕ 1 ವಿಕೆಟ್​ನ ರೋಚಕ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Aug 07, 2025 | 12:54 PM

Share

ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್​ನ ದ್ವಿತೀಯ ಪಂದ್ಯವು ರಣರೋಚಕ ಪೈಪೋಟಿಗೆ ಸಾಕ್ಷಿಯಾಗಿತ್ತು. ಮ್ಯಾಂಚೆಸ್ಟರ್​ನ ಓಲ್ಡ್​​ ಟ್ರಾಫೋರ್ಡ್​ ಮೈದಾನದಲ್ಲಿ ನಡೆದ ಈ ಟೂರ್ನಿಯ ದ್ವಿತೀಯ ಪಂದ್ಯದಲ್ಲಿ ಸದರ್ನ್ ಬ್ರೇವ್ ಹಾಗೂ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಮ್ಯಾಂಚೆಸ್ಟರ್ ಒರಿಜಿನಲ್ಸ್ ಪರ ಫಿಲ್ ಸಾಲ್ಟ್ (60) ಭರ್ಜರಿ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕದ ನೆರವಿನೊಂದಿಗೆ ಮ್ಯಾಂಚೆಸ್ಟರ್ ಒರಿಜಿನಲ್ಸ್ ತಂಡವು 100 ಎಸೆತಗಳಲ್ಲಿ 4 ವಿಕೆಟ್ ಕಳೆದುಕೊಂಡು 131 ರನ್​ ಗಳಿಸಿದ್ದರು.

100 ಎಸೆತಗಳಲ್ಲಿ 132 ರನ್​ಗಳ ಗುರಿ ಪಡೆದ ಸದರ್ನ್ ಬ್ರೇವ್ ತಂಡಕ್ಕೆ ಡು ಪ್ಲೂಯ್ (25) ಉತ್ತಮ ಆರಂಭ ಒದಗಿಸಿದ್ದರು. ಇನ್ನು ಜೇಸನ್ ರಾಯ್ 30 ರನ್​ಗಳ ಕೊಡುಗೆ ನೀಡಿದರು. ಆದರೆ ಆ ಬಳಿಕ ದಿಢೀರ್ ಕುಸಿತಕ್ಕೊಳಗಾದ ಸದರ್ನ್ ಬ್ರೇವ್ ತಂಡಕ್ಕೆ ಕೊನೆಯ ಮೂರು ಎಸೆತಗಳಲ್ಲಿ 3 ರನ್​ಗಳು ಬೇಕಿದ್ದವು.

ಅತ್ತ ಮ್ಯಾಚೆಂಸ್ಟರ್ ಒರಿಜಿನಲ್ಸ್ ತಂಡಕ್ಕೆ ಗೆಲ್ಲಲು ಕೇವಲ 2 ವಿಕೆಟ್​ಗಳ ಅಗತ್ಯವಿತ್ತು. ಇದೇ ವೇಳೆ ಗ್ರೆಗೊರಿ ಎಸೆದ ಎಸೆತದಲ್ಲಿ ಟೈಮಲ್ ಮಿಲ್ಸ್ ಬೌಲ್ಡ್ ಆದರು. ಪರಿಣಾಮ ಕೊನೆಯ 2 ಎಸೆತಗಳಲ್ಲಿ 3 ರನ್​ಗಳು ಬೇಕಿದ್ದವು. ಅಂತಿಮ ದಾಂಡಿಗನಾಗಿ ಕ್ರೀಸ್​ಗೆ ಬಂದ ರೀಸ್ ಟೋಪ್ಲಿ ಫೋರ್ ಬಾರಿಸುವ ಮೂಲಕ ಸದರ್ನ್​ ಬ್ರೇವ್ ತಂಡಕ್ಕೆ 1 ವಿಕೆಟ್​ನ ರೋಚಕ ತಂದುಕೊಟ್ಟರು. ಇದೀಗ ಈ ರಣರೋಚಕ ಪಂದ್ಯದ ವಿಡಿಯೋ ವೈರಲ್ ಆಗಿದೆ.

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ