ಹನ್ನೊಂದು ದಿನಗಳ ಕಾಲ ನಡೆಯಲಿದೆ ರ‍್ಯಾಲಿ, ವಿವಿಧ ಜಿಲ್ಲೆಗಳ ನೂರಾರು ಯುವಕರು ಭಾಗಿ

ಅರುಣ್​ ಕುಮಾರ್​ ಬೆಳ್ಳಿ

Updated on: Nov 26, 2024 | 10:31 AM

ಕೊಪ್ಪಳದಲ್ಲಿ ಆರಂಭವಾಗಿರುವ ನೇಮಕಾತಿ ರ‍್ಯಾಲಿಯಲ್ಲಿ ಆಯ್ಕೆಯಾಗುವ ಯುವಕರನ್ನು ಸೇನೆಯ ಬೇರೆ ಬೇರೆ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಮೊದಲ ಸುತ್ತಿನ ಓಟದ ಸ್ಪರ್ಧೆಯಲ್ಲಿ ಕೆಲ ಯುವಕರು ಅರ್ಹತಾ ಮಟ್ಟವನ್ನು ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ಹತಾಷೆಯಿಂದ ರ‍್ಯಾಲಿಯಿಂದ ಹೊರಬೀಳುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಕೊಪ್ಪಳ: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ರ‍್ಯಾಲಿ ಇಂದಿನಿಂದ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಆರಂಭವಾಗಿದ್ದು ಪ್ರಕ್ರಿಯೆಯು ಡಿಸೆಂಬರ್ 8ರವರೆಗೆ ನಡೆಯಲಿದೆ. ಭಾರತೀಯ ಸೇನೆಯ ಡೆಪ್ಯುಟಿ ಡೈರೆಕ್ಟರ್ ಜನರಲ್ ಆಫ್ ರಿಕ್ರೂಟ್ಮೆಂಟ್ ಬ್ರಿಗೇಡಿಯರ್ ಎಸ್ ಕೆ ಸಿಂಗ್ ಮತ್ತು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ನೇಮಕಾತಿ ರ‍್ಯಾಲಿಗೆ ಚಾಲನೆ ನೀಡಿದರು. ಹನ್ನೊಂದು ದಿನಗಳ ಕಾಲ ನಡೆಯಲಿರುವ ರ‍್ಯಾಲಿಯಲ್ಲಿ ಸೇನೆಗೆ ಸೇರುವ ಅಕಾಂಕ್ಷಿಗಳ ಫಿಟ್ನೆಸ್ ಟೆಸ್ಟ್ ವಿವಿಧ ಹಂತ ಮತ್ತು ಆಯಾಮಗಳಲ್ಲಿ ನಡೆಯಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಾಜಿ ಅಗ್ನಿವೀರ್‌ಗಳಿಗೆ ಸಿಐಎಸ್ಎಫ್, ಬಿಎಸ್ಎಫ್, ಆರ್​​ಪಿಎಫ್​​ನಲ್ಲಿ ಶೇ10 ಮೀಸಲಾತಿ, ವಯೋಮಿತಿ ಸಡಿಲಿಕೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.