ಕೋಲಾರದಲ್ಲಿ ದೇವರಮೂರ್ತಿ ವಿರೂಪಗೊಳಿಸಿದ ಕಿಡಿಗೇಡಿ; ವಿಡಿಯೋ ವೈರಲ್​

ಕೋಲಾರ ನಗರದ ಆರ್​ಟಿಒ ಕಚೇರಿ ಬಳಿ ಇರುವ ಜಡೆಮುನೇಶ್ವರ ದೇಗುಲ ಮೂರ್ತಿಗಳನ್ನು ದುಷ್ಕರ್ಮಿಯೊಬ್ಬ ವಿರೂಪಗೊಳಿಸಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭಕ್ತರ ಭಾವನೆಗೆ ಘಾಸಿ ಗೊಳಿಸಿ, ವಿಗ್ರಹವನ್ನು ನಾಶಪಡಿಸಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕೇಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕೋಲಾರ, ಅ.22: ಕಿಡಿಗೇಡಿಯೊಬ್ಬ ದೇವರ ಮೂರ್ತಿಗಳನ್ನು ವಿರೂಪಗೊಳಿಸಿದ ಘಟನೆ ಕೋಲಾರ (Kolar) ನಗರದ ಆರ್​ಟಿಒ ಕಚೇರಿ ಬಳಿ ನಡೆದಿದೆ. ಹೌದು, ಜಡೆಮುನೇಶ್ವರ ದೇಗುಲ ಮೂರ್ತಿಗಳನ್ನು ದುಷ್ಕರ್ಮಿಯೊಬ್ಬ ವಿರೂಪಗೊಳಿಸಿರುವ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭಕ್ತರ ಭಾವನೆಗೆ ಘಾಸಿ ಗೊಳಿಸಿ, ವಿಗ್ರಹವನ್ನು ನಾಶಪಡಿಸಿರುವ ವ್ಯಕ್ತಿಯನ್ನು ಕೂಡಲೇ ಬಂಧಿಸಬೇಕೇಂದು ಸ್ಥಳೀಯರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಕೋಲಾರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Sun, 22 October 23

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More
Follow Us