ಚನ್ನಪಟ್ಟಣದಲ್ಲಿ ಮಗ ನಿಖಿಲ್ ಸೋಲುಂಡ ಬಾಧೆ ಕುಮಾರಸ್ವಾಮಿಯವರನ್ನು ಇನ್ನೂ ಕಾಡುತ್ತಿದೆ

ಅರುಣ್​ ಕುಮಾರ್​ ಬೆಳ್ಳಿ

Updated on: Nov 30, 2024 | 2:37 PM

ಚುನಾವಣೆಯಲ್ಲಿ ಸೋತರೂ ನಿಖಿಲ್ ಕುಮಾರಸ್ವಾಮಿ ಹೆಚ್ಚು ಆ್ಯಕ್ಟಿವ್ ಆಗಿದ್ದಾರೆ ಮತ್ತು ಮಾಧ್ಯಮಗಳ ಜೊತೆ ಅವರ ಎಂದಿನಂತೆ ಮಾತಾಡುತ್ತಿದ್ದಾರೆ. ಆಫ್ ಕೋರ್ಸ್ ನಿಖಿಲ್ ಕೂಡ ಒಂದು ವಾರ ಮಾಧ್ಯಮಗಳ ಕಣ್ಣಿಗೆ ಬಿದ್ದಿರಲಿಲ್ಲ ಅನ್ನೋದು ಬೇರೆ ವಿಚಾರ. ಚನ್ನಪಟ್ಟಣ ಚುನಾವಣೆ ಸೋಲನ್ನು ಅವರು ಸ್ಪೋರ್ಟ್ ಆಗಿ ಸ್ವೀಕರಿಸಿದ್ದಾರೆ.

ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಎದುರಾದ ಸೋಲಿನ ಕಹಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಇನ್ನೂ ಬಾಧಿಸುತ್ತಿದೆ. ಮಗನನ್ನು ಗೆಲ್ಲಿಸಲು ಅವರು ಹಗಲು ರಾತ್ರಿ ಶ್ರಮಪಟ್ಟಿದ್ದರು. ಜೆಡಿಎಸ್ ಪಕ್ಷದ ಕಾರ್ಯಕರ್ತರು ಇಂದು ಚನ್ನಪಟ್ಟಣದಲ್ಲಿ ಅಯೋಜಿಸಿದ ಕೃತಜ್ಞತಾ ಕಾರ್ಯಕ್ರಮಕ್ಕೆ ಆಗಮಿಸಿದಾಗಲೂ ಅವರು ಎಂದಿನಂತಿರದೆ ಅನ್ಯಮನಸ್ಕರಾಗಿದ್ದರು. ವೇದಿಕೆ ಮೇಲೆ ಬಂದು ತಮ್ಮೊಂದಿಗೆ ಹಸ್ತಲಾಘವ ಮಾಡಿದ ಜನರಿಗೆ ಮತ್ತು ಕಾರ್ಯಕರ್ತರಿಗೆ ಅವರು ಮುಗುಳ್ನಗದೆ ಕೈ ಮುಂದೆ ಚಾಚಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನಿಖಿಲ್ ಹ್ಯಾಟ್ರಿಕ್​ ಸೋಲಿನ ಬಗ್ಗೆ ಅನಿತಾ ಕುಮಾರಸ್ವಾಮಿ ಭಾವನಾತ್ಮಕ ಪೋಸ್ಟ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.