ಮುನಿರತ್ನರನ್ನು ದಿಢೀರ್ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು: ಐಸಿಯುನಲ್ಲಿ ಚಿಕಿತ್ಸೆ
ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿರುವ ಮುನಿರತ್ನ, ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇಂದು ದಿಢೀರ್ ಅವರನ್ನು ಜಯದೇವ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದು, ಕೆಲವು ಹೆಲ್ತ್ ಚೆಕಪ್ ಮಾಡಿದ್ದಾರೆ. ಈ ವೇಳೆ ಮುನಿರತ್ನ ಮೌನವಾಗಿದ್ದರು.
ಬೆಂಗಳೂರು, ಸೆಪ್ಟೆಂಬರ್ 16: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಮುನಿರತ್ನರನ್ನ (Munirathna) ಪೊಲೀಸರು ಜಯದೇವ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸಂಜೆ ಬೌರಿಂಗ್ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಲಾಗಿತ್ತು. ಕಾರ್ಡಿಯಾಲಜಿಸ್ಟ್ಗೆ ತೋರಿಸುವಂತೆ ವೈದ್ಯರು ಸೂಚಿನೆ ಮೇರೆಗೆ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳೆದ 1 ಗಂಟೆಯಿಂದ ಮುನಿರತ್ನಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಐಸಿಯು ವಾರ್ಡ್ನಲ್ಲಿ ಚಿಕಿತ್ಸೆ ಮುಂದುವರಿದೆ. ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ ಮುನಿರತ್ನ ವಿಚಾರಣೆ ಮಾಡಲಾಗುತ್ತಿದ್ದು, ಕಳದೆ ಎರಡು ದಿನದಿಂದ ಮಂಕಾಗಿದ್ದಾರೆ. ಬಂಧನದ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ.
ವರದಿ: ಪ್ರದೀಪ್ ಕ್ರೈಂ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 16, 2024 10:31 PM
Follow Us
Latest Videos
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್
ನೌಕಾ ಡ್ರೋನ್ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್

