AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು: ಐಸಿಯುನಲ್ಲಿ ಚಿಕಿತ್ಸೆ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು: ಐಸಿಯುನಲ್ಲಿ ಚಿಕಿತ್ಸೆ

ಗಂಗಾಧರ​ ಬ. ಸಾಬೋಜಿ
|

Updated on:Sep 16, 2024 | 10:32 PM

Share

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿರುವ ಮುನಿರತ್ನ, ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇಂದು ದಿಢೀರ್ ಅವರನ್ನು​ ಜಯದೇವ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದು, ಕೆಲವು ಹೆಲ್ತ್ ಚೆಕಪ್ ಮಾಡಿದ್ದಾರೆ. ಈ ವೇಳೆ ಮುನಿರತ್ನ ಮೌನವಾಗಿದ್ದರು.

ಬೆಂಗಳೂರು, ಸೆಪ್ಟೆಂಬರ್​ 16: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಮುನಿರತ್ನರನ್ನ (Munirathna) ಪೊಲೀಸರು ಜಯದೇವ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸಂಜೆ ಬೌರಿಂಗ್‌ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಲಾಗಿತ್ತು. ಕಾರ್ಡಿಯಾಲಜಿಸ್ಟ್‌ಗೆ ತೋರಿಸುವಂತೆ ವೈದ್ಯರು ಸೂಚಿನೆ ಮೇರೆಗೆ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳೆದ 1 ಗಂಟೆಯಿಂದ ಮುನಿರತ್ನಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಐಸಿಯು ವಾರ್ಡ್​ನಲ್ಲಿ ಚಿಕಿತ್ಸೆ ಮುಂದುವರಿದೆ. ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ  ಮುನಿರತ್ನ ವಿಚಾರಣೆ ಮಾಡಲಾಗುತ್ತಿದ್ದು, ಕಳದೆ ಎರಡು ದಿನದಿಂದ ಮಂಕಾಗಿದ್ದಾರೆ. ಬಂಧನದ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ.

ವರದಿ: ಪ್ರದೀಪ್​ ಕ್ರೈಂ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 16, 2024 10:31 PM

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More