ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು: ಐಸಿಯುನಲ್ಲಿ ಚಿಕಿತ್ಸೆ

|

Updated on: Sep 16, 2024 | 10:32 PM

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿರುವ ಮುನಿರತ್ನ, ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ. ಇಂದು ದಿಢೀರ್ ಅವರನ್ನು​ ಜಯದೇವ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದು, ಕೆಲವು ಹೆಲ್ತ್ ಚೆಕಪ್ ಮಾಡಿದ್ದಾರೆ. ಈ ವೇಳೆ ಮುನಿರತ್ನ ಮೌನವಾಗಿದ್ದರು.

ಬೆಂಗಳೂರು, ಸೆಪ್ಟೆಂಬರ್​ 16: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಪ್ರಕರಣದಲ್ಲಿ ಬಂಧನವಾಗಿರುವ ಶಾಸಕ ಮುನಿರತ್ನರನ್ನ (Munirathna) ಪೊಲೀಸರು ಜಯದೇವ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಸಂಜೆ ಬೌರಿಂಗ್‌ ಆಸ್ಪತ್ರೆಯಲ್ಲಿ ಇಸಿಜಿ ಮಾಡಿಸಲಾಗಿತ್ತು. ಕಾರ್ಡಿಯಾಲಜಿಸ್ಟ್‌ಗೆ ತೋರಿಸುವಂತೆ ವೈದ್ಯರು ಸೂಚಿನೆ ಮೇರೆಗೆ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳೆದ 1 ಗಂಟೆಯಿಂದ ಮುನಿರತ್ನಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಐಸಿಯು ವಾರ್ಡ್​ನಲ್ಲಿ ಚಿಕಿತ್ಸೆ ಮುಂದುವರಿದೆ. ಎರಡು ದಿನದಿಂದ ಪೊಲೀಸ್ ಠಾಣೆಯಲ್ಲಿ  ಮುನಿರತ್ನ ವಿಚಾರಣೆ ಮಾಡಲಾಗುತ್ತಿದ್ದು, ಕಳದೆ ಎರಡು ದಿನದಿಂದ ಮಂಕಾಗಿದ್ದಾರೆ. ಬಂಧನದ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ.

ವರದಿ: ಪ್ರದೀಪ್​ ಕ್ರೈಂ 

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 10:31 pm, Mon, 16 September 24

Follow us on